22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

ಸುಲ್ಕೇರಿ: ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾವತಿ ನಿತ್ಯಾನಂದ ನಾವರ, ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾ ಗೋರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷೆ ಪುಷ್ಪಾವತಿ ಎನ್ ನಾವರ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಳ್ತಂಗಡಿ ಲಯನೆಸ್ಸ್ ಕ್ಲಬ್ ಅಧ್ಯಕ್ಷೆಯಾಗಿ, ಅಳದಂಗಡಿ ಗ್ರಾ.ಪಂ ಸದಸ್ಯೆಯಾಗಿ, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ನಿರ್ದೇಶಕರಾಗಿ, ಮಹಿಳಾ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಕಳೆದ ಅವಧಿಯ ಯಶಸ್ವಿ ಅಧ್ಯಕ್ಷೆ ವಿದ್ಯಾ ಗೋರೆ ಅವರು ಈ ಭಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರುಗಳಾಗಿ ಶ್ರೀಮತಿ ರುಕ್ಮಿಣಿ ಹೆಗ್ಡೆ, ಶ್ರೀಮತಿ ಹೇಮಲತಾ ಶೆಟ್ಟಿ, ಶ್ರೀಮತಿ ಲಲಿತ, ಶ್ರೀಮತಿ ಸ್ವಪ್ನ, ಶ್ರೀಮತಿ ವಿದ್ಯಾಶ್ರೀ ಪಿ ಜೈನ್, ಶ್ರೀಮತಿ ಪುಷ್ಪ, ಶ್ರೀಮತಿ ವಾರಿಜಾ, ಶ್ರೀಮತಿ ಸುಚಿತ್ರ, ಶ್ರೀಮತಿ ಸೌಮ್ಯ, ಶ್ರೀಮತಿ ಪ್ರೇಮಲತಾ, ಶ್ರೀಮತಿ ಲೀಲಾ ಇವರುಗಳು ಅವಿರೋಧವಾಗಿ ಆಯ್ಕೆಯಾಗುರುತ್ತಾರೆ. ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿಯಾಗಿ ಬಿ ನಾಗೇಂದ್ರ ನಡೆಸಿಕೊಟ್ಟರು.

Related posts

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya
error: Content is protected !!