September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

ಸುಲ್ಕೇರಿ: ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾವತಿ ನಿತ್ಯಾನಂದ ನಾವರ, ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾ ಗೋರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷೆ ಪುಷ್ಪಾವತಿ ಎನ್ ನಾವರ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಳ್ತಂಗಡಿ ಲಯನೆಸ್ಸ್ ಕ್ಲಬ್ ಅಧ್ಯಕ್ಷೆಯಾಗಿ, ಅಳದಂಗಡಿ ಗ್ರಾ.ಪಂ ಸದಸ್ಯೆಯಾಗಿ, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ನಿರ್ದೇಶಕರಾಗಿ, ಮಹಿಳಾ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಕಳೆದ ಅವಧಿಯ ಯಶಸ್ವಿ ಅಧ್ಯಕ್ಷೆ ವಿದ್ಯಾ ಗೋರೆ ಅವರು ಈ ಭಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರುಗಳಾಗಿ ಶ್ರೀಮತಿ ರುಕ್ಮಿಣಿ ಹೆಗ್ಡೆ, ಶ್ರೀಮತಿ ಹೇಮಲತಾ ಶೆಟ್ಟಿ, ಶ್ರೀಮತಿ ಲಲಿತ, ಶ್ರೀಮತಿ ಸ್ವಪ್ನ, ಶ್ರೀಮತಿ ವಿದ್ಯಾಶ್ರೀ ಪಿ ಜೈನ್, ಶ್ರೀಮತಿ ಪುಷ್ಪ, ಶ್ರೀಮತಿ ವಾರಿಜಾ, ಶ್ರೀಮತಿ ಸುಚಿತ್ರ, ಶ್ರೀಮತಿ ಸೌಮ್ಯ, ಶ್ರೀಮತಿ ಪ್ರೇಮಲತಾ, ಶ್ರೀಮತಿ ಲೀಲಾ ಇವರುಗಳು ಅವಿರೋಧವಾಗಿ ಆಯ್ಕೆಯಾಗುರುತ್ತಾರೆ. ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿಯಾಗಿ ಬಿ ನಾಗೇಂದ್ರ ನಡೆಸಿಕೊಟ್ಟರು.

Related posts

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya
error: Content is protected !!