30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ. 23ರಂದು ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಕ್ರಿಸ್ಮಸ್ ಹಬ್ಬದ ಮಹತ್ವವನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿ ಕ್ರಿಸ್ಮಸ್ ಹಬ್ಬವು ಪ್ರೀತಿ, ಶಾಂತಿ ಮತ್ತು ಸಂತೋಷದ ಸಂಕೇತವಾಗಿದೆ ಎಂದು ಹೇಳಿ, ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ಕೋರಿದರು.

ಮುಖ್ಯ ಅತಿಥಿಗಳಾಗಿ ವಂ|ಸ್ವಾ|ಲ್ಯಾನ್ಸಿ ನೋಯಲ್ ರೆಬೆಲ್ಲೋ ಮಾತನಾಡಿ, ನಾವು ನಮ್ಮ ಹೆತ್ತವರೊಂದಿಗೆ ಶಿಕ್ಷಕರೊಂದಿಗೆ ಹಾಗೂ ಸ್ನೇಹಿತರೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಆಚರಿಸಬೇಕು ಆಗ ನಾವು ನಮ್ಮ ಜೀವನದಲ್ಲಿ ಬದಲಾವಣೆಯನ್ನು ಕಾಣುತ್ತೇವೆ. ನಮ್ಮ ಜೀವನದಲ್ಲಿ ಹೆತ್ತವರನ್ನು ,ಶಿಕ್ಷಕರನ್ನು ಗೌರವಿಸಬೇಕು ಎಂದು ಹೇಳಿ, ಮಕ್ಕಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸ , ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ , ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಲಿಯೋ ನೊರೊನ್ಹ , ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನ , ಸೇಕ್ರೆಡ್ ಹಾರ್ಟ್ ಕಾನ್ವೆಂಟಿನ ಸಿ| ಅನಿತಾ ಫೆರ್ನಾಂಡಿಸ್ ಮತ್ತು ಸಿ| ಅಂಜಲಿಯಾ ಫೆರ್ನಾಂಡಿಸ್ , ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ನಿರೂಪಿಸಿ, ವಿದ್ಯಾರ್ಥಿನಿಯಾದ ಮನ್ವಿತಾ ನಾಯಕ್ ಸ್ವಾಗತಿಸಿ, ಹವನ ಪ್ರಭು ಧನ್ಯವಾದವನ್ನು ಸಮರ್ಪಿಸಿದರು.

Related posts

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!