26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ. 23ರಂದು ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಕ್ರಿಸ್ಮಸ್ ಹಬ್ಬದ ಮಹತ್ವವನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿ ಕ್ರಿಸ್ಮಸ್ ಹಬ್ಬವು ಪ್ರೀತಿ, ಶಾಂತಿ ಮತ್ತು ಸಂತೋಷದ ಸಂಕೇತವಾಗಿದೆ ಎಂದು ಹೇಳಿ, ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ಕೋರಿದರು.

ಮುಖ್ಯ ಅತಿಥಿಗಳಾಗಿ ವಂ|ಸ್ವಾ|ಲ್ಯಾನ್ಸಿ ನೋಯಲ್ ರೆಬೆಲ್ಲೋ ಮಾತನಾಡಿ, ನಾವು ನಮ್ಮ ಹೆತ್ತವರೊಂದಿಗೆ ಶಿಕ್ಷಕರೊಂದಿಗೆ ಹಾಗೂ ಸ್ನೇಹಿತರೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಆಚರಿಸಬೇಕು ಆಗ ನಾವು ನಮ್ಮ ಜೀವನದಲ್ಲಿ ಬದಲಾವಣೆಯನ್ನು ಕಾಣುತ್ತೇವೆ. ನಮ್ಮ ಜೀವನದಲ್ಲಿ ಹೆತ್ತವರನ್ನು ,ಶಿಕ್ಷಕರನ್ನು ಗೌರವಿಸಬೇಕು ಎಂದು ಹೇಳಿ, ಮಕ್ಕಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸ , ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ , ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಲಿಯೋ ನೊರೊನ್ಹ , ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನ , ಸೇಕ್ರೆಡ್ ಹಾರ್ಟ್ ಕಾನ್ವೆಂಟಿನ ಸಿ| ಅನಿತಾ ಫೆರ್ನಾಂಡಿಸ್ ಮತ್ತು ಸಿ| ಅಂಜಲಿಯಾ ಫೆರ್ನಾಂಡಿಸ್ , ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ನಿರೂಪಿಸಿ, ವಿದ್ಯಾರ್ಥಿನಿಯಾದ ಮನ್ವಿತಾ ನಾಯಕ್ ಸ್ವಾಗತಿಸಿ, ಹವನ ಪ್ರಭು ಧನ್ಯವಾದವನ್ನು ಸಮರ್ಪಿಸಿದರು.

Related posts

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya
error: Content is protected !!