32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಹೊಸಂಗಡಿ ತೊರ್ಪೆ ಡ್ಯಾಂ ಬಳಿ ನದಿಯಲ್ಲಿ ಕಾರ್ಕಳ ಮಿಯಾರು ನಿವಾಸಿ ಯತೀಶ್ ಪೂಜಾರಿ ಶವ ಪತ್ತೆ : ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರಿಂದ ಪೊಲೀಸರಿಗೆ ದೂರು

ಬೆಳ್ತಂಗಡಿ: ಪತ್ನಿ ಮತ್ತು ಆಕೆಯ ಮನೆಯವರ ನಡುವೆ ಗಲಾಟೆ ನಡೆದ ಬಳಿಕ ವ್ಯಕ್ತಿಯೋವ೯ನ ಶವ ನದಿ ನೀರಿನಲ್ಲಿ ಪತ್ತೆಯಾಗಿದ್ದು, ಆತನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಮನೆಯವರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.24ರಂದು ವರದಿಯಾಗಿದೆ.

ಕಾರ್ಕಳ ತಾಲೂಕು ಮಿಯಾರು ಗ್ರಾಮದ ಬೈದರ್ಲಬೆಟ್ಟು ಮನೆ ನಿವಾಸಿ
ಯತೀಶ್ ಪೂಜಾರಿ(41) ನದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದವರಾಗಿದ್ದಾರೆ.

ಪ್ರಕರಣದ ಹಿನ್ನೆಲೆ : ಯತೀಶ್‌ ಪೂಜಾರಿ ಎಂಬವರು ಸುಮಾರು 15 ವರ್ಷಗಳ ಹಿಂದೆ ಹೊಸಂಗಡಿ ಗ್ರಾಮ ಪೆರಿಂಜೆ ಸುಜಯ ಎಂಬವರೊಂದಿಗೆ ವಿವಾಹವಾಗಿದ್ದು, ಎರಡು ಗಂಡು ಮಕ್ಕಳಿದ್ದಾರೆ .
ಯತೀಶ ಮದುವೆಯಾದ ಬಳಿಕ ಹೆಂಡತಿ ಮನೆಯ ಬಳಿಯಲ್ಲೇ ಪ್ರತ್ಯೇಕ ಮನೆ ಮಾಡಿ ವಾಸವಿದ್ದವನು, ಸುಮಾರು ಒಂದೂವರೆ ವರ್ಷದ ಹಿಂದೆ ಗಂಡ ಹೆಂಡತಿ ಮಧ್ಯೆ ಕೌಟುಂಬಿಕ ಮನಸ್ತಾಪ ಉಂಟಾಗಿ ಯತೀಶ್‌ ಮನೆ ಬಿಟ್ಟು ತನ್ನ ಅಕ್ಕನ ಮನೆಯಲ್ಲಿದ್ದ. ಬಳಿಕ ವಿದೇಶಕ್ಕೆ ಹೋಗಿದ್ದು, ಇತ್ತೀಚೆಗೆ ಸುಮಾರು 20 ದಿನಗಳ ಹಿಂದೆ ವಿದೇಶದಿಂದ ಬಂದು ತನ್ನ ಅಕ್ಕನ ಮನೆಯಲ್ಲಿದ್ದವನು, ಒಂದು ವಾರದ ಹಿಂದೆ ಮುಡಿಪು ಎಂಬಲ್ಲಿ ಹೋಟೇಲ್‌ ಕೆಲಸಕ್ಕೆ ಸೇರಿಕೊಂಡಿದ್ದನು. ಈ ನಡುವೆ ಹೆಂಡತಿಯೊಂದಿಗೆ ದೂರವಾಣಿ ಮೂಲಕ ಜಗಳವಾಡಿ ಡಿ.22 ರಂದು ಹೆಂಡತಿಯ ಮನೆಯಾದ ಹೊಸಂಗಡಿ ಗ್ರಾಮದ ಪೆರಿಂಜೆಗೆ ಬಂದು ಹೆಂಡತಿ ಹಾಗೂ ಅವರ ಮನೆಯವರೊಂದಿಗೆ ಜಗಳವಾಡಿ ಬಳಿಕ ಸಂಜೆ ಸುಮಾರು 4 ಗಂಟೆಗೆ ಅಲ್ಲಿಂದ ಹೋಗಿದ್ದ ಎನ್ನಲಾಗಿದೆ. ಇದಾದ ಬಳಿಕ ಡಿ. 24 ರಂದು ಸಂಜೆ ಯತೀಶ್‌ ಪೂಜಾರಿಯ ಮೃತದೇಹವು ಹೊಸಂಗಡಿ ತೊರ್ಪೆ ಡ್ಯಾಂ ಬಳಿ ನದಿ ನೀರಿನಲ್ಲಿ
ಪತ್ತೆಯಾಗಿದ್ದು, ಯತೀಶ್‌ ಪೂಜಾರಿಯು ಡಿ. 22ರಂದು ತನ್ನ ಹೆಂಡತಿ ಮನೆಯಲ್ಲಿ ಜಗಳವಾಡಿ ಹೋದವನು ಹೊಸಂಗಡಿ ಗ್ರಾಮದ ಪೇರಿ ಎಂಬಲ್ಲಿ ತೋರ್ಪೆ ಡ್ಯಾಂ ಬಳಿ ಫಲ್ಗುಣಿ ನದಿ ನೀರಿಗೆ ಆಕಸ್ಮಿಕವಾಗಿ ಬಿದ್ದು ಅಥವಾ ನದಿನೀರಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಸಾಧ್ಯತೆಯಿದ್ದರೂ, ಯತೀಶ್‌ ಪೂಜಾರಿಗೂ ಆತನ ಹೆಂಡತಿ ಮನೆಯವರಿಗೂ ಗಲಾಟೆ ನಡೆದ ಬಳಿಕ ನದಿ ನೀರಿನಲ್ಲಿ ಬಿದ್ದು ಮೃತಪಟ್ಟಿರುವುದರಿಂದ ಈತನ ಮರಣದಲ್ಲಿ ಸಂಶಯವಿದ್ದು, ಸೂಕ್ತ ತನಿಖೆ ನಡೆಸುವಂತೆ ಆತನ ಸಹೋದರ ಕಿಶೋರ್ ಕೋಟ್ಯಾನ್ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಅಬಕಾರಿ ದಳ ದಾಳಿ ಶೇಖರಿಸಿಟ್ಟಿದ್ದ ರೂ.29 ಸಾವಿರ ಮದ್ಯ ವಶಕ್ಕೆ : ಆರೋಪಿ ಬಂಧನ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

Suddi Udaya
error: Content is protected !!