July 23, 2026
ಅಪರಾಧ ಸುದ್ದಿ

ಹೊಸಂಗಡಿ ತೊರ್ಪೆ ಡ್ಯಾಂ ಬಳಿ ನದಿಯಲ್ಲಿ ಕಾರ್ಕಳ ಮಿಯಾರು ನಿವಾಸಿ ಯತೀಶ್ ಪೂಜಾರಿ ಶವ ಪತ್ತೆ : ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರಿಂದ ಪೊಲೀಸರಿಗೆ ದೂರು

ಬೆಳ್ತಂಗಡಿ: ಪತ್ನಿ ಮತ್ತು ಆಕೆಯ ಮನೆಯವರ ನಡುವೆ ಗಲಾಟೆ ನಡೆದ ಬಳಿಕ ವ್ಯಕ್ತಿಯೋವ೯ನ ಶವ ನದಿ ನೀರಿನಲ್ಲಿ ಪತ್ತೆಯಾಗಿದ್ದು, ಆತನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಮನೆಯವರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.24ರಂದು ವರದಿಯಾಗಿದೆ.

ಕಾರ್ಕಳ ತಾಲೂಕು ಮಿಯಾರು ಗ್ರಾಮದ ಬೈದರ್ಲಬೆಟ್ಟು ಮನೆ ನಿವಾಸಿ
ಯತೀಶ್ ಪೂಜಾರಿ(41) ನದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದವರಾಗಿದ್ದಾರೆ.

ಪ್ರಕರಣದ ಹಿನ್ನೆಲೆ : ಯತೀಶ್‌ ಪೂಜಾರಿ ಎಂಬವರು ಸುಮಾರು 15 ವರ್ಷಗಳ ಹಿಂದೆ ಹೊಸಂಗಡಿ ಗ್ರಾಮ ಪೆರಿಂಜೆ ಸುಜಯ ಎಂಬವರೊಂದಿಗೆ ವಿವಾಹವಾಗಿದ್ದು, ಎರಡು ಗಂಡು ಮಕ್ಕಳಿದ್ದಾರೆ .
ಯತೀಶ ಮದುವೆಯಾದ ಬಳಿಕ ಹೆಂಡತಿ ಮನೆಯ ಬಳಿಯಲ್ಲೇ ಪ್ರತ್ಯೇಕ ಮನೆ ಮಾಡಿ ವಾಸವಿದ್ದವನು, ಸುಮಾರು ಒಂದೂವರೆ ವರ್ಷದ ಹಿಂದೆ ಗಂಡ ಹೆಂಡತಿ ಮಧ್ಯೆ ಕೌಟುಂಬಿಕ ಮನಸ್ತಾಪ ಉಂಟಾಗಿ ಯತೀಶ್‌ ಮನೆ ಬಿಟ್ಟು ತನ್ನ ಅಕ್ಕನ ಮನೆಯಲ್ಲಿದ್ದ. ಬಳಿಕ ವಿದೇಶಕ್ಕೆ ಹೋಗಿದ್ದು, ಇತ್ತೀಚೆಗೆ ಸುಮಾರು 20 ದಿನಗಳ ಹಿಂದೆ ವಿದೇಶದಿಂದ ಬಂದು ತನ್ನ ಅಕ್ಕನ ಮನೆಯಲ್ಲಿದ್ದವನು, ಒಂದು ವಾರದ ಹಿಂದೆ ಮುಡಿಪು ಎಂಬಲ್ಲಿ ಹೋಟೇಲ್‌ ಕೆಲಸಕ್ಕೆ ಸೇರಿಕೊಂಡಿದ್ದನು. ಈ ನಡುವೆ ಹೆಂಡತಿಯೊಂದಿಗೆ ದೂರವಾಣಿ ಮೂಲಕ ಜಗಳವಾಡಿ ಡಿ.22 ರಂದು ಹೆಂಡತಿಯ ಮನೆಯಾದ ಹೊಸಂಗಡಿ ಗ್ರಾಮದ ಪೆರಿಂಜೆಗೆ ಬಂದು ಹೆಂಡತಿ ಹಾಗೂ ಅವರ ಮನೆಯವರೊಂದಿಗೆ ಜಗಳವಾಡಿ ಬಳಿಕ ಸಂಜೆ ಸುಮಾರು 4 ಗಂಟೆಗೆ ಅಲ್ಲಿಂದ ಹೋಗಿದ್ದ ಎನ್ನಲಾಗಿದೆ. ಇದಾದ ಬಳಿಕ ಡಿ. 24 ರಂದು ಸಂಜೆ ಯತೀಶ್‌ ಪೂಜಾರಿಯ ಮೃತದೇಹವು ಹೊಸಂಗಡಿ ತೊರ್ಪೆ ಡ್ಯಾಂ ಬಳಿ ನದಿ ನೀರಿನಲ್ಲಿ
ಪತ್ತೆಯಾಗಿದ್ದು, ಯತೀಶ್‌ ಪೂಜಾರಿಯು ಡಿ. 22ರಂದು ತನ್ನ ಹೆಂಡತಿ ಮನೆಯಲ್ಲಿ ಜಗಳವಾಡಿ ಹೋದವನು ಹೊಸಂಗಡಿ ಗ್ರಾಮದ ಪೇರಿ ಎಂಬಲ್ಲಿ ತೋರ್ಪೆ ಡ್ಯಾಂ ಬಳಿ ಫಲ್ಗುಣಿ ನದಿ ನೀರಿಗೆ ಆಕಸ್ಮಿಕವಾಗಿ ಬಿದ್ದು ಅಥವಾ ನದಿನೀರಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಸಾಧ್ಯತೆಯಿದ್ದರೂ, ಯತೀಶ್‌ ಪೂಜಾರಿಗೂ ಆತನ ಹೆಂಡತಿ ಮನೆಯವರಿಗೂ ಗಲಾಟೆ ನಡೆದ ಬಳಿಕ ನದಿ ನೀರಿನಲ್ಲಿ ಬಿದ್ದು ಮೃತಪಟ್ಟಿರುವುದರಿಂದ ಈತನ ಮರಣದಲ್ಲಿ ಸಂಶಯವಿದ್ದು, ಸೂಕ್ತ ತನಿಖೆ ನಡೆಸುವಂತೆ ಆತನ ಸಹೋದರ ಕಿಶೋರ್ ಕೋಟ್ಯಾನ್ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya
error: Content is protected !!