22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

ಶಿಶಿಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳು ಕಟ್ಟಿಸಿದ ಸರಕಾರಿ ಶಾಲೆಯ ಉದ್ಘಾಟನಾ ಸಮಾರಂಭ ಮತ್ತು ಶಾಲಾ ವಿದ್ಯಾರ್ಥಿಗಳು, ಹಳೆವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಂದ ಸಾಂಸ್ಕೃತಿಕ ವೈಭವ ಡಿ. 29 ರಂದು ನಡೆಯಲಿದೆ.

ಬೆಳಿಗ್ಗೆ 10ಕ್ಕೆ ನೂತನ ಕೊಠಡಿಗಳ ಉದ್ಘಾಟನೆಯನ್ನು ಕೇಂದ್ರ ಅತೀ ಸಣ್ಣ ಮಧ್ಯಮ ಕೈಗಾರಿಕಾ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಭಾಧ್ಯಕ್ಷ ಯುಟಿ ಖಾದರ್ ಫರೀದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಎಸ್, ಸಂಸದರು ಕ್ಯಾ| ಬ್ರಿಜೇಶ್ ಚೌಟ, ರಾಜ್ಯಸಭೆ ಸಂಸದರು ಡಾ.ಡಿ. ವೀರೇಂದ್ರ ಹೆಗ್ಗಡೆ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕರಾದ ಎಸ್ ಎಲ್ ಭೋಜೆ ಗೌಡ, ಐವನ್ ಡಿ’ಸೋಜ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬೊಟ್ಯಾಡಿ, ಶಿತಿಲ ಗ್ರಾ. ಪಂ ಅಧ್ಯಕ್ಷ ಸುದಿನ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಶಿಕ್ಷಣ ಸಂಯೋಜಕರು ಚೇತನಾಕ್ಷಿ, ಸಿಆರ್‌ಪಿ ಕೊಕ್ಕಡ ಮತ್ತು ಪೆರ್ಲ ಕ್ಲಸ್ಟರ್ ವಿಲೈಡ್ ಪಿಂಟೋ ಭಾಗವಹಿಸಲಿದ್ದಾರೆ.

ರೋಟರಿ ಕ್ಲಬ್ ಬೆಳ್ತಂಗಡಿ ಇವರ ಸಹಕಾರದಲ್ಲಿ ಸುಮಾರು ಹತ್ತು ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶೌಚಾಲಯ ಕೊಠಡಿ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.
ಸಾಂಸ್ಕೃತಿಕ ವೈಭವ: ಸಂಜೆ ೬.೦೦ ರಿಂದ ಸಾಂಸ್ಕೃತಿಕ ವೈಭವವು ನಡೆಯಲಿದ್ದು ಇದರ ಸಭಾ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮೋಹನ್ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೆಕಳ ಹಾಜಬ್ಬ, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕರು ಮೋಹನ್ ಕುಮಾರ್, ಮೆಂಬರ್ ಗ್ಲೋಬಲ್ ಎಕ್ಸಿಕ್ಯೂಟಿವ್ ಕಮಿಟಿ ಸಿ.ಇ.ಒ.(ಇಂಡಿಯಾ) ರಾಜೇಶ್ ಫಡ್ಕೆ, ಶಶಿಧರ್ ಶೆಟ್ಟಿ ಬರೋಡ ಉದ್ಯಮಿಗಳು ಬೆಂಗಳೂರು, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ ಪುಷ್ಪಗಿರಿ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ ಹಾಗೂ ಇತರರು ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ ೯:೩೦ ರಿಂದ ಚೈತನ್ಯ ಕಲಾವಿದರು ಬೈಲೂರು ವತಿಯಿಂದ ರಾಘು ಮಾಸ್ಟುç ಹಾಸ್ಯಮಯ ತುಳುನಾಟಕ ನಡೆಯಲಿದೆ. ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ಕಾವು–ಕೌಕ್ರಾಡಿ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ: ರೂ.8 ಲಕ್ಷ ವೆಚ್ಚದ ಮಹಾದ್ವಾರ ಉದ್ಘಾಟನೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

Suddi Udaya
error: Content is protected !!