23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢಶಾಲೆ ಯಲ್ಲಿ 14 ವರ್ಷ 5 ತಿಂಗಳುಗಳ ಕಾಲ ಸೇವೆ ಸಲ್ಲಿಸಿ ಪ್ರಸಕ್ತ ಸಾಲಿನಲ್ಲಿ ಮಂಗಳೂರಿಗೆ ವರ್ಗಾವಣೆಗೊಂಡಿರುವ ಗಣಿತ ಶಿಕ್ಷಕಿ ಶ್ರೀಮತಿ ಪುಷ್ಪ ಇವರ ಬೀಳ್ಕೊಡುಗೆ ಕಾರ್ಯಕ್ರಮ ಡಿ.20 ರಂದು ನೆರವೇರಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ, ಸದಸ್ಯರಾದ ಗಣೇಶ ಗೌಡ, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಮಮತಾ ಪ್ರಿಯಾ ಉಪಸ್ಥಿತರಿದ್ದರು. ಅಲ್ಲದೆ ಎಸ್ ಡಿ ಯಂ ಸಿ ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ,ಮುಖ್ಯ ಶಿಕ್ಷಕರು ರಾಜೇಂದ್ರ ಭಟ್ ಹಾಗೂ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಹಾಗೂ ಬಿಸಿ ಊಟ ಸಿಬ್ಬಂದಿ ಉಪಸ್ಥಿತರಿದ್ದರು.

ಮಕ್ಕಳು, ಶಿಕ್ಷಕರು ಅವರ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ವೈದ್ಯರು ಪ್ರದೀಪ್ ನಾವೂರು ಇವರ ಉಪಸ್ಥಿತಿಯಲ್ಲಿ ಪುಷ್ಪ ಅವರನ್ನು ಅಭಿನಂದಿಸಲಾಯಿತು. ಪುಷ್ಪ ರವರ ವತಿಯಿಂದ ರೂ,. 20,000 ಮೊತ್ತವನ್ನು ಎಸ್ ಎಸ್ ಎಲ್ ಸಿ ಯಲ್ಲಿ 500 ಅಂಕ ಕ್ಕಿಂತ ಹೆಚ್ಚು ಅಂಕ ಬಂದ ವಿದ್ಯಾರ್ಥಿಗಳಿಗೆ ಅದರ ಬಡ್ಡಿ ಹಣ ನೀಡಿ ಗೌರವಿಸುವ ಸಲುವಾಗಿ ಶಾಲೆಗೆ ಹಸ್ತಾಂತರ ಮಾಡಿದರು.

ಮೀನಾ ಕಾರ್ಯಕ್ರಮ ನಿರೂಪಿಸಿ, ವಿನೋದ ಸ್ವಾಗತಿಸಿ, . ಭವ್ಯ ಧನ್ಯವಾದವಿತ್ತರು.

Related posts

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!