26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢಶಾಲೆ ಯಲ್ಲಿ 14 ವರ್ಷ 5 ತಿಂಗಳುಗಳ ಕಾಲ ಸೇವೆ ಸಲ್ಲಿಸಿ ಪ್ರಸಕ್ತ ಸಾಲಿನಲ್ಲಿ ಮಂಗಳೂರಿಗೆ ವರ್ಗಾವಣೆಗೊಂಡಿರುವ ಗಣಿತ ಶಿಕ್ಷಕಿ ಶ್ರೀಮತಿ ಪುಷ್ಪ ಇವರ ಬೀಳ್ಕೊಡುಗೆ ಕಾರ್ಯಕ್ರಮ ಡಿ.20 ರಂದು ನೆರವೇರಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ, ಸದಸ್ಯರಾದ ಗಣೇಶ ಗೌಡ, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಮಮತಾ ಪ್ರಿಯಾ ಉಪಸ್ಥಿತರಿದ್ದರು. ಅಲ್ಲದೆ ಎಸ್ ಡಿ ಯಂ ಸಿ ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ,ಮುಖ್ಯ ಶಿಕ್ಷಕರು ರಾಜೇಂದ್ರ ಭಟ್ ಹಾಗೂ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಹಾಗೂ ಬಿಸಿ ಊಟ ಸಿಬ್ಬಂದಿ ಉಪಸ್ಥಿತರಿದ್ದರು.

ಮಕ್ಕಳು, ಶಿಕ್ಷಕರು ಅವರ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ವೈದ್ಯರು ಪ್ರದೀಪ್ ನಾವೂರು ಇವರ ಉಪಸ್ಥಿತಿಯಲ್ಲಿ ಪುಷ್ಪ ಅವರನ್ನು ಅಭಿನಂದಿಸಲಾಯಿತು. ಪುಷ್ಪ ರವರ ವತಿಯಿಂದ ರೂ,. 20,000 ಮೊತ್ತವನ್ನು ಎಸ್ ಎಸ್ ಎಲ್ ಸಿ ಯಲ್ಲಿ 500 ಅಂಕ ಕ್ಕಿಂತ ಹೆಚ್ಚು ಅಂಕ ಬಂದ ವಿದ್ಯಾರ್ಥಿಗಳಿಗೆ ಅದರ ಬಡ್ಡಿ ಹಣ ನೀಡಿ ಗೌರವಿಸುವ ಸಲುವಾಗಿ ಶಾಲೆಗೆ ಹಸ್ತಾಂತರ ಮಾಡಿದರು.

ಮೀನಾ ಕಾರ್ಯಕ್ರಮ ನಿರೂಪಿಸಿ, ವಿನೋದ ಸ್ವಾಗತಿಸಿ, . ಭವ್ಯ ಧನ್ಯವಾದವಿತ್ತರು.

Related posts

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಆ. 1: ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಸ್ಕೈ ಗ್ರೂಪ್ಸ್ ಅಲ್ಯೂಮಿನಿಯಂ ಏಜೆನ್ಸಿಯೂ ಶುಭಾರಂಭ

Suddi Udaya

ಕರಿಮಣೇಲು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ-ಸಾಧಕರಿಗೆ ಸನ್ಮಾನ

Suddi Udaya

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
error: Content is protected !!