25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

ಮಿತ್ತಬಾಗಿಲು: ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವವು ಡಿ.25ರಿಂದ ಡಿ. 31ರವರೆಗೆ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು, ದಾನಶಾಲಾ ಮಠ, ಕಾರ್ಕಳ ಇವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ನೆರವೇರಲಿರುವುದು.

ಡಿ.25 ತೋರಣ ಮುಹೂರ್ತ, ವಿಮಾನ ಶುದ್ಧಿ, ಯಕ್ಷಾರಾಧನೆ, ಧ್ವಜಾರೋಹಣ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ ನಡೆಯಿತು.

ಸಂಜೆ 6.೦೦ರಿಂದ ಶ್ರೀ ಕ್ಷೇತ್ರಪಾಲ ದೇವರಿಗೆ ಆರಾಧನಾ ಪೂರ್ವಕ ಕಲಾರೋಪಣೆ, ಡಿ.26 ನಾಂದಿಮಂಗಲ, ಮೃತ್ತಿಕಾ ಸಂಗ್ರಹಣ, ಅಂಕುರಾರ್ಪಣೆ, ಭೇರಿತಾಡನ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ. ಸಂಜೆ 5.30ಕ್ಕೆ ಉಪಾಹಾರದ ವ್ಯವಸ್ಥೆ, ಡಿ.27 ವಾಸ್ತು ಶಾಂತಿ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ ಡಿ.28 ಶ್ರೀ ಪೀಠಯಂತ್ರಾರಾಧನೆ, ನಿತ್ಯವಿಧಿಸಹಿತ ಕ್ಷೀರಾಭಿಷೇಕ, ಡಿ.29 ನಿತ್ಯವಿಧಿ ಸಹಿತ ಬೃಹಚ್ಫಾಂತಿ ಯಂತ್ರಾರಾಧನೆ, ಪಾಲಕಿ ಉತ್ಸವ, ಕ್ಷೀರಾಭಿಷೇಕ, ಡಿ.೩೦ (ಮಧ್ಯಾಹ್ನ) ದರ್ಶನಬಲಿ, ರಥಾರೋಹಣ, ಮಹಾನೈವೇದ್ಯ ಪೂಜೆ ಸಂಘ ಸಂತರ್ಪಣೆ, ರಾತ್ರಿ ಗಂಟೆ 9.00 ರಿಂದ ಮಹಾರಥೋತ್ಸವ, ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ 108 ಕಲಶ ಮಹಾಭಿಷೇಕ ರಾತ್ರಿ ಗಂಟೆ 7.00ಕ್ಕೆ ಬೆಂಗಳೂರು ದೂರದರ್ಶನದ ಬಿ. ಗ್ರೇಡ್ ಕಲಾವಿದೆ ಕು| ಅನನ್ಯ ರಂಜಿನಿ, ಮೂಡಬಿದಿರೆ. ಇವರಿಂದ ಭರತನಾಟ್ಯ ನಡೆಯಲಿದೆ.

ಜ. 10 ರಂದು ಅತಿಶಯ ಕ್ಷೇತ್ರ ಶ್ರವಣಗುಂಡ ಶ್ರೀ ಬ್ರಹ್ಮಯಕ್ಷ ದೇವರ ಸನ್ನಿಧಿಯಲ್ಲಿ ಮುಡಿ ಅಕ್ಕಿ ಪೂಜೆ (ಗುಂಡುದರ್ಶನ ದಿನ), ಕುಂಕುಮೋತ್ಸವ, ಧ್ವಜಾವರೋಹಣ ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!