September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

ಮಿತ್ತಬಾಗಿಲು: ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವವು ಡಿ.25ರಿಂದ ಡಿ. 31ರವರೆಗೆ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು, ದಾನಶಾಲಾ ಮಠ, ಕಾರ್ಕಳ ಇವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ನೆರವೇರಲಿರುವುದು.

ಡಿ.25 ತೋರಣ ಮುಹೂರ್ತ, ವಿಮಾನ ಶುದ್ಧಿ, ಯಕ್ಷಾರಾಧನೆ, ಧ್ವಜಾರೋಹಣ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ ನಡೆಯಿತು.

ಸಂಜೆ 6.೦೦ರಿಂದ ಶ್ರೀ ಕ್ಷೇತ್ರಪಾಲ ದೇವರಿಗೆ ಆರಾಧನಾ ಪೂರ್ವಕ ಕಲಾರೋಪಣೆ, ಡಿ.26 ನಾಂದಿಮಂಗಲ, ಮೃತ್ತಿಕಾ ಸಂಗ್ರಹಣ, ಅಂಕುರಾರ್ಪಣೆ, ಭೇರಿತಾಡನ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ. ಸಂಜೆ 5.30ಕ್ಕೆ ಉಪಾಹಾರದ ವ್ಯವಸ್ಥೆ, ಡಿ.27 ವಾಸ್ತು ಶಾಂತಿ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ ಡಿ.28 ಶ್ರೀ ಪೀಠಯಂತ್ರಾರಾಧನೆ, ನಿತ್ಯವಿಧಿಸಹಿತ ಕ್ಷೀರಾಭಿಷೇಕ, ಡಿ.29 ನಿತ್ಯವಿಧಿ ಸಹಿತ ಬೃಹಚ್ಫಾಂತಿ ಯಂತ್ರಾರಾಧನೆ, ಪಾಲಕಿ ಉತ್ಸವ, ಕ್ಷೀರಾಭಿಷೇಕ, ಡಿ.೩೦ (ಮಧ್ಯಾಹ್ನ) ದರ್ಶನಬಲಿ, ರಥಾರೋಹಣ, ಮಹಾನೈವೇದ್ಯ ಪೂಜೆ ಸಂಘ ಸಂತರ್ಪಣೆ, ರಾತ್ರಿ ಗಂಟೆ 9.00 ರಿಂದ ಮಹಾರಥೋತ್ಸವ, ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ 108 ಕಲಶ ಮಹಾಭಿಷೇಕ ರಾತ್ರಿ ಗಂಟೆ 7.00ಕ್ಕೆ ಬೆಂಗಳೂರು ದೂರದರ್ಶನದ ಬಿ. ಗ್ರೇಡ್ ಕಲಾವಿದೆ ಕು| ಅನನ್ಯ ರಂಜಿನಿ, ಮೂಡಬಿದಿರೆ. ಇವರಿಂದ ಭರತನಾಟ್ಯ ನಡೆಯಲಿದೆ.

ಜ. 10 ರಂದು ಅತಿಶಯ ಕ್ಷೇತ್ರ ಶ್ರವಣಗುಂಡ ಶ್ರೀ ಬ್ರಹ್ಮಯಕ್ಷ ದೇವರ ಸನ್ನಿಧಿಯಲ್ಲಿ ಮುಡಿ ಅಕ್ಕಿ ಪೂಜೆ (ಗುಂಡುದರ್ಶನ ದಿನ), ಕುಂಕುಮೋತ್ಸವ, ಧ್ವಜಾವರೋಹಣ ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!