22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿ 50 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಬೆಳ್ತಂಗಡಿ ಕ್ಷೇತ್ರದ ದೀನ ದಲಿತರ, ನಿರ್ಗತಿಕರ, ಬಡವರ ಬಂಧುವಾಗಿ ಕೆಲಸ ಮಾಡಿದ್ದ ಮಾಜಿ ಶಾಸಕ ಕೀರ್ತಿಶೇಷ ಕೇದೆ ಮನೆತನದ
ದಿವಂಗತ ಕೆ. ವಸಂತ ಬಂಗೇರರವರು ಪ್ರಪ್ರಥಮ ಬಾರಿಗೆ ಅವರ ಹುಟ್ಟೂರಾದ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿ ರಾಜಕೀಯ ಪ್ರವೇಶಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಅವರ ಹೆಸರಿನಲ್ಲಿ ವೃತ್ತ ಮತ್ತು ಪುತ್ಥಳಿ ನಿರ್ಮಾಣಕ್ಕೆ ಎಲ್ಲಾ ಧಾರ್ಮಿಕ, ಸಾಮಾಜಿಕ, ರಾಜಕೀಯ ಮುಖಂಡರು ಮತ್ತು ಅವರ ಅಭಿಮಾನಿಗಳನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿರುತ್ತದೆ ವೃತ್ತ ಮತ್ತು ಪುತ್ಥಳಿಯನ್ನು ಅವರ ಹುಟ್ಟುಹಬ್ಬದ ದಿನದಂದು ಅನಾವರಣಗೊಳಿಸಲಾಗುವುದು ಎಂದು ಸಮಿತಿ ಸದಸ್ಯ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya
error: Content is protected !!