25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿ 50 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಬೆಳ್ತಂಗಡಿ ಕ್ಷೇತ್ರದ ದೀನ ದಲಿತರ, ನಿರ್ಗತಿಕರ, ಬಡವರ ಬಂಧುವಾಗಿ ಕೆಲಸ ಮಾಡಿದ್ದ ಮಾಜಿ ಶಾಸಕ ಕೀರ್ತಿಶೇಷ ಕೇದೆ ಮನೆತನದ
ದಿವಂಗತ ಕೆ. ವಸಂತ ಬಂಗೇರರವರು ಪ್ರಪ್ರಥಮ ಬಾರಿಗೆ ಅವರ ಹುಟ್ಟೂರಾದ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿ ರಾಜಕೀಯ ಪ್ರವೇಶಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಅವರ ಹೆಸರಿನಲ್ಲಿ ವೃತ್ತ ಮತ್ತು ಪುತ್ಥಳಿ ನಿರ್ಮಾಣಕ್ಕೆ ಎಲ್ಲಾ ಧಾರ್ಮಿಕ, ಸಾಮಾಜಿಕ, ರಾಜಕೀಯ ಮುಖಂಡರು ಮತ್ತು ಅವರ ಅಭಿಮಾನಿಗಳನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿರುತ್ತದೆ ವೃತ್ತ ಮತ್ತು ಪುತ್ಥಳಿಯನ್ನು ಅವರ ಹುಟ್ಟುಹಬ್ಬದ ದಿನದಂದು ಅನಾವರಣಗೊಳಿಸಲಾಗುವುದು ಎಂದು ಸಮಿತಿ ಸದಸ್ಯ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!