September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

ಸುಲ್ಕೇರಿ: ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾವತಿ ನಿತ್ಯಾನಂದ ನಾವರ, ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾ ಗೋರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷೆ ಪುಷ್ಪಾವತಿ ಎನ್ ನಾವರ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಳ್ತಂಗಡಿ ಲಯನೆಸ್ಸ್ ಕ್ಲಬ್ ಅಧ್ಯಕ್ಷೆಯಾಗಿ, ಅಳದಂಗಡಿ ಗ್ರಾ.ಪಂ ಸದಸ್ಯೆಯಾಗಿ, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ನಿರ್ದೇಶಕರಾಗಿ, ಮಹಿಳಾ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಕಳೆದ ಅವಧಿಯ ಯಶಸ್ವಿ ಅಧ್ಯಕ್ಷೆ ವಿದ್ಯಾ ಗೋರೆ ಅವರು ಈ ಭಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರುಗಳಾಗಿ ಶ್ರೀಮತಿ ರುಕ್ಮಿಣಿ ಹೆಗ್ಡೆ, ಶ್ರೀಮತಿ ಹೇಮಲತಾ ಶೆಟ್ಟಿ, ಶ್ರೀಮತಿ ಲಲಿತ, ಶ್ರೀಮತಿ ಸ್ವಪ್ನ, ಶ್ರೀಮತಿ ವಿದ್ಯಾಶ್ರೀ ಪಿ ಜೈನ್, ಶ್ರೀಮತಿ ಪುಷ್ಪ, ಶ್ರೀಮತಿ ವಾರಿಜಾ, ಶ್ರೀಮತಿ ಸುಚಿತ್ರ, ಶ್ರೀಮತಿ ಸೌಮ್ಯ, ಶ್ರೀಮತಿ ಪ್ರೇಮಲತಾ, ಶ್ರೀಮತಿ ಲೀಲಾ ಇವರುಗಳು ಅವಿರೋಧವಾಗಿ ಆಯ್ಕೆಯಾಗುರುತ್ತಾರೆ. ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿಯಾಗಿ ಬಿ ನಾಗೇಂದ್ರ ನಡೆಸಿಕೊಟ್ಟರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya
error: Content is protected !!