25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ: ಲಾಯಿಲದಿಂದ ಬೆಳ್ತಂಗಡಿ ನಗರ ಸಂಪರ್ಕಿಸುವ ನಾಗರಿಕರ ಬಹು ವರ್ಷಗಳ ಬೇಡಿಕೆಯಾದ ಮಠದಬೈಲು ಎಂಬಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಡಿ.26 ರಂದು ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು.

ಸುಮಾರು 35 ಲಕ್ಷ ರೂಪಾಯಿ ವೆಚ್ಚದಲ್ಲಿ ಕನ್ನಾಜೆ ಕಾಲು ಸಂಕ ನಿರ್ಮಾಣಗೊಳ್ಳಲಿದ್ದು ಕಾಯಿಲೆ, ಮೇಲಂತಬೆಟ್ಟು, ಸವಣಾಲು ಸೇರಿದಂತೆ ಹಲವು ಗ್ರಾಮಗಳನ್ನು ಬೆಸೆಯಲಿದೆ. ಈ ಯೋಜನೆ ಕುರಿತು ಜನರ ಬಹು ವರ್ಷಗಳ ಬೇಡಿಕೆಯಾಗಿದೆ. ಇಲಾಖೆ ಮಧ್ಯೆ ಸಂಪರ್ಕ ರಸ್ತೆ ನಿರ್ಮಾಣ ಮಾಡಲು ಅವಕಾಶ ಮಾಡಿಕೊಟ್ಟರು ಮಾಜಿ ಸಿಎಂ ಯಡಿಯೂರಪ್ಪನವರು. ಅಭಿವೃದ್ಧಿಗೆ ಸರ್ಕಾರ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ ಎಂದು ಹೇಳಿದರು.

ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಪ್ರಮುಖರಾದ ಈಶ್ವರ ಬೈರ, ಯೋಗೀಶ್ ಬಿಢೆ,ದಯಾನಂದ ಶೆಟ್ಟಿ ಕನ್ನಾಜೆ ,ಗಣೇಶ್ ಸಪಲ್ಯ, ರುಕ್ಮಯ ಕನ್ನಾಜೆ, ಸುಧಾಕರ್ ಬಿ.ಎಲ್. ಸೇರಿದಂತೆ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.ಗಿರೀಶ್ ಡೋಂಗ್ರೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಗಣೇಶ್ ಆರ್ ಧನ್ಯವಾದವಿತ್ತರು.

Related posts

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!