July 23, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವ್ಯುತ್ಪತ್ತಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶೈಕ್ಷಣಿಕ ಅನುಭವ ನೀಡುವ ಉದ್ದೇಶದಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. 

ಗ್ರಾಮೀಣ ಆಡಳಿತ ವ್ಯವಸ್ಥೆ, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಕಾರ್ಯಪದ್ಧತಿ ಹಾಗೂ ವಿವಿಧ ಜನಕಲ್ಯಾಣ ಯೋಜನೆಗಳ ಜಾರಿಗೆ ಸಂಬಂಧಿಸಿದ ಕ್ಷೇತ್ರಮಟ್ಟದ ಅಧ್ಯಯನಕ್ಕೆ ಈ ಭೇಟಿ ಅನುವು ಮಾಡಿಕೊಟ್ಟಿತು.  ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ಹಾಗೂ ವ್ಯುತ್ಪತ್ತಿ ಸಂಘದ ಉಪನ್ಯಾಸಕರ ಮಾರ್ಗದರ್ಶನದೊಂದಿಗೆ  ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಅಲ್ಲಿನ ದಿನನಿತ್ಯದ ಆಡಳಿತ ಕಾರ್ಯವೈಖರಿಯನ್ನು ತಿಳಿದುಕೊಂಡರು.

ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್‌ನ ಕಾರ್ಯವೈಖರಿ, ಘನತ್ಯಾಜ್ಯ ವಿಲೇವಾರಿ ಘಟಕ , ಅತ್ತಾಜೆ ಕೆರೆ , ಮಲತ್ಯಾಜ್ಯನಿರ್ವಹಣೆ ಹಾಗೂ ಜೈವಿಕಗೊಬ್ಬರ ತಯಾರಿ ಘಟಕ,ಅರಿವು ಡಿಜಿಟಲ್ ಗ್ರಂಥಾಲಯ ಮತ್ತು  ಕೂಸಿನ ಮನೆ ಮುಂತಾದ ವಿನೂತನ ಯೋಜನೆಗಳ ಯಶಸ್ವೀ ಕಾರ್ಯ ನಿರ್ವಹಣೆ ಕುರಿತು ಸಂಕ್ಷಿಪ್ತ ಮಾಹಿತಿ ಹಂಚಿಕೊಂಡರು.

ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಧ್ಯಕ್ಷೆ ಉಷಾಕಿರಣ ಕಾರಂತ್ ಪಂಚಾಯತ್ ವ್ಯಾಪ್ತಿಯ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ, ಸ್ವಚ್ಛ ಭಾರತ ಮಿಷನ್, ಜಲ ಸಂರಕ್ಷಣೆ, ಗೃಹ ನಿರ್ಮಾಣ ಯೋಜನೆ, ಸಾನಿಟೇಷನ್,  ಮುಂತಾದ ಹಲವು ಸರ್ಕಾರಿ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಹೇಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂಬುದನ್ನು ವಿವರವಾಗಿ ಪರಿಚಯಿಸಿದರು. ವಿದ್ಯಾರ್ಥಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷರೊಂದಿಗೆ ಸಂವಾದ ನಡೆಸಿ, ಯುವಕರ ಪಾತ್ರ, ಮತದಾರರ ಜಾಗೃತಿ, ಸುಸ್ಥಿರ ಅಭಿವೃದ್ಧಿ ಮತ್ತು ಗ್ರಾಮೀಣ ಸ್ವಚ್ಛತೆ ಕುರಿತಂತೆ ಅನೇಕ ಪ್ರಶ್ನೆಗಳನ್ನು ಕೇಳಿ ಉತ್ತರಗಳನ್ನು ಪಡೆದರು.

ಮತದಾರರ ಜಾಗೃತಿ, ಸುಸ್ಥಿರ ಅಭಿವೃದ್ಧಿ ಮತ್ತು ಗ್ರಾಮೀಣ ಸ್ವಚ್ಛತೆ ಕುರಿತಂತೆ ಅನೇಕ ಪ್ರಶ್ನೆಗಳನ್ನು ಕೇಳಿ ಉತ್ತರಗಳನ್ನು ಪಡೆದರು.ಸ್ಥಳೀಯ ಆಡಳಿತ ವ್ಯವಸ್ಥೆಯ ಪಾರದರ್ಶಕತೆ, ಹೊಣೆಗಾರಿಕೆ, ಮತ್ತು ಜನಸಹಭಾಗಿತ್ವವು ಪ್ರಜಾಪ್ರಭುತ್ವದ ಬಲವರ್ಧನೆಗೆ ಹೇಗೆ ಸಹಕರಿಸುತ್ತದೆ ಎಂಬ ಅರಿವು ವಿದ್ಯಾರ್ಥಿಗಳಲ್ಲಿ ಮೂಡಿದುದಾಗಿ ಉಪನ್ಯಾಸಕರು ಅಭಿಪ್ರಾಯಪಟ್ಟರು. ಈ ಶೈಕ್ಷಣಿಕ ಭೇಟಿ ಕಾರ್ಯಕ್ರಮವನ್ನು ವ್ಯುತ್ಪತ್ತಿ ಸಂಘದ ಸಂಯೋಜಕರಾದ ಶ್ರೀಮತಿ ದಿವ್ಯಾ ಕುಮಾರಿ, ಡಾ.ಸಾಜಿದಾ ಹಾಗೂ ಶ್ಯಾಮಿಲಾ ಸಂಯೋಜಿಸಿದರು. ಕಾಲೇಜಿನ ಗ್ರಂಥಪಾಲಕ ಮನೋಹರ್ ಶೆಟ್ಟಿ ಪಂಚಾಯತ್ ಸಿಬ್ಬಂದಿಗಳಾದ ನಾಗೇಶ್ ಹಾಗೂ ಉಮೇಶ್ ಸಹಕರಿಸಿದರು.ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು ಉಪಸ್ಥಿತರಿದ್ದರು.

Related posts

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!