22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

ಬೆಳಾಲು: ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಅಂಗವಾಗಿ ಧಾರ್ಮಿಕ ಸಭೆಯು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ದೇವಸ್ಥಾನ ಬೈಲುವಾರಿನ ಹಿರಿಯ ಸದಸ್ಯರಾದ ರಾಮಣ್ಣ ಗೌಡ ವಚ್ಚ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಧಾರ್ಮಿಕ ಭಾಷಣಕಾರರಾಗಿ ಆಗಮಿಸಿದ ಶ್ರೀಮತಿ ರೋಹಿಣಿ ಶ್ರೀಪಾದ, ಧರ್ಮದರ್ಶಿಗಳು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಹರೀಶ್ ಗೌಡ ಆರಿಕೋಡಿ, ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕರಾದ ಮೋಹನ್ ಕುಮಾರ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು, ಶ್ರೀಮತಿ ಹೇಮಾವತಿ ಬಿ ಜೀವಂಧರ್ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿಯ ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುಣ್ಣಾಯ, ಉಪಾಧ್ಯಕ್ಷೆ ಶ್ರೀಮತಿ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ, ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಪೂಜಾರಿ ಪೋಸೊಟ್ಟು ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಸದಸ್ಯರು, ಜಾತ್ರೋತ್ಸವ ಸಮಿತಿಯ ಸದಸ್ಯರು, ಬೈಲುವಾರು ಸಮಿತಿಯ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಸದಸ್ಯರು ಊರ ಪರವೂರ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.
ಶ್ರೀಮತಿ ರೋಹಿಣಿ ಶ್ರೀಪಾದ ಧರ್ಮದರ್ಶಿಗಳು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಹರೀಶ್ ಗೌಡ ಆರಿಕೋಡಿ, ಕಿರಣ್ ಚಂದ್ರ ಡಿ ಪುಷ್ಪಗಿರಿ,ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕರಾದ ಮೋಹನ್ ಕುಮಾರ್. ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮನಶ್ರೀ ಸೀತಾರಾಮ್ ಬೆಳಾಲು ಇವರನ್ನು ಸಮಿತಿ ವತಿಯಿಂದ ಗೌರವಿಸಲಾಯಿತು.

ಈ ವೇಳೆ ಉಜಿರೆ ದೇವಸ್ಥಾನ ಆಡಳಿತ ಮೊಕ್ತೇಸರರು ಪಡ್ವೆಟ್ನಾಯರು ಮತ್ತು ಶಾಸಕ ಹರೀಶ್ ಪೂಂಜಾರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya
error: Content is protected !!