24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

ಬೆಳಾಲು: ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಅಂಗವಾಗಿ ಧಾರ್ಮಿಕ ಸಭೆಯು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ದೇವಸ್ಥಾನ ಬೈಲುವಾರಿನ ಹಿರಿಯ ಸದಸ್ಯರಾದ ರಾಮಣ್ಣ ಗೌಡ ವಚ್ಚ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಧಾರ್ಮಿಕ ಭಾಷಣಕಾರರಾಗಿ ಆಗಮಿಸಿದ ಶ್ರೀಮತಿ ರೋಹಿಣಿ ಶ್ರೀಪಾದ, ಧರ್ಮದರ್ಶಿಗಳು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಹರೀಶ್ ಗೌಡ ಆರಿಕೋಡಿ, ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕರಾದ ಮೋಹನ್ ಕುಮಾರ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು, ಶ್ರೀಮತಿ ಹೇಮಾವತಿ ಬಿ ಜೀವಂಧರ್ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿಯ ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುಣ್ಣಾಯ, ಉಪಾಧ್ಯಕ್ಷೆ ಶ್ರೀಮತಿ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ, ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಪೂಜಾರಿ ಪೋಸೊಟ್ಟು ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಸದಸ್ಯರು, ಜಾತ್ರೋತ್ಸವ ಸಮಿತಿಯ ಸದಸ್ಯರು, ಬೈಲುವಾರು ಸಮಿತಿಯ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಸದಸ್ಯರು ಊರ ಪರವೂರ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.
ಶ್ರೀಮತಿ ರೋಹಿಣಿ ಶ್ರೀಪಾದ ಧರ್ಮದರ್ಶಿಗಳು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಹರೀಶ್ ಗೌಡ ಆರಿಕೋಡಿ, ಕಿರಣ್ ಚಂದ್ರ ಡಿ ಪುಷ್ಪಗಿರಿ,ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕರಾದ ಮೋಹನ್ ಕುಮಾರ್. ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮನಶ್ರೀ ಸೀತಾರಾಮ್ ಬೆಳಾಲು ಇವರನ್ನು ಸಮಿತಿ ವತಿಯಿಂದ ಗೌರವಿಸಲಾಯಿತು.

ಈ ವೇಳೆ ಉಜಿರೆ ದೇವಸ್ಥಾನ ಆಡಳಿತ ಮೊಕ್ತೇಸರರು ಪಡ್ವೆಟ್ನಾಯರು ಮತ್ತು ಶಾಸಕ ಹರೀಶ್ ಪೂಂಜಾರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ಸಂಸ್ಥಾಪಕರ ದಿನ ಹಾಗೂ ದ್ವಜ ದಿನಾಚರಣೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya
error: Content is protected !!