September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ: ಲಾಯಿಲದಿಂದ ಬೆಳ್ತಂಗಡಿ ನಗರ ಸಂಪರ್ಕಿಸುವ ನಾಗರಿಕರ ಬಹು ವರ್ಷಗಳ ಬೇಡಿಕೆಯಾದ ಮಠದಬೈಲು ಎಂಬಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಡಿ.26 ರಂದು ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು.

ಸುಮಾರು 35 ಲಕ್ಷ ರೂಪಾಯಿ ವೆಚ್ಚದಲ್ಲಿ ಕನ್ನಾಜೆ ಕಾಲು ಸಂಕ ನಿರ್ಮಾಣಗೊಳ್ಳಲಿದ್ದು ಕಾಯಿಲೆ, ಮೇಲಂತಬೆಟ್ಟು, ಸವಣಾಲು ಸೇರಿದಂತೆ ಹಲವು ಗ್ರಾಮಗಳನ್ನು ಬೆಸೆಯಲಿದೆ. ಈ ಯೋಜನೆ ಕುರಿತು ಜನರ ಬಹು ವರ್ಷಗಳ ಬೇಡಿಕೆಯಾಗಿದೆ. ಇಲಾಖೆ ಮಧ್ಯೆ ಸಂಪರ್ಕ ರಸ್ತೆ ನಿರ್ಮಾಣ ಮಾಡಲು ಅವಕಾಶ ಮಾಡಿಕೊಟ್ಟರು ಮಾಜಿ ಸಿಎಂ ಯಡಿಯೂರಪ್ಪನವರು. ಅಭಿವೃದ್ಧಿಗೆ ಸರ್ಕಾರ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ ಎಂದು ಹೇಳಿದರು.

ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಪ್ರಮುಖರಾದ ಈಶ್ವರ ಬೈರ, ಯೋಗೀಶ್ ಬಿಢೆ,ದಯಾನಂದ ಶೆಟ್ಟಿ ಕನ್ನಾಜೆ ,ಗಣೇಶ್ ಸಪಲ್ಯ, ರುಕ್ಮಯ ಕನ್ನಾಜೆ, ಸುಧಾಕರ್ ಬಿ.ಎಲ್. ಸೇರಿದಂತೆ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.ಗಿರೀಶ್ ಡೋಂಗ್ರೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಗಣೇಶ್ ಆರ್ ಧನ್ಯವಾದವಿತ್ತರು.

Related posts

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಸ್ವಾಗತಿಸಿದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

Suddi Udaya
error: Content is protected !!