July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

ಉಜಿರೆ, : ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಆಫ್ ನೆಕರ್ನಾಟಕ ಮತ್ತು GAT ಕ್ಯಾಂಪಸ್ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಆರನೇ ಆವೃತ್ತಿಯ ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳ ತಂಡವು ಪುರುಷರ ವಿಭಾಗ ಮತ್ತು ಮಹಿಳಾ ವಿಭಾಗದಲ್ಲೂ ಪ್ರಶಸ್ತಿಯನ್ನು ಪಡೆಯುವುದರ ಮೂಲಕ ಪಂದ್ಯಾಟದಲ್ಲಿ ಮೊದಲ ಬಾರಿ ಚಾಂಪಿಯನ್ ಗಳಾಗಿ ಹೊರ ಹೊಮ್ಮಿದ್ದಾರೆ.

ಫೈನಲ್ ಹಂತದ ಮಹಿಳೆಯರ ನೆಟ್ ಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಬೆಂಗಳೂರು ಸಿಟಿ ತಂಡವನ್ನು ಮಣಿಸುವ ಮೂಲಕ ಪ್ರಥಮ ಸ್ಥಾನವನ್ನು ಪಡೆಯಿತು. ಜಿಲ್ಲೆಯನ್ನು ಪ್ರತಿನಿಧಿಸಿದ ಮಹಿಳಾ ತಂಡದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ 10 ಜನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಪ್ರಶಸ್ತಿ ವಿಜೇತ ತಂಡದಲ್ಲಿ ವಿದ್ಯಾರ್ಥಿಗಳಾದ ವರ್ಷಿತ, ರಶ್ಮಿ , ಸುರಕ್ಷಾ , ಪಲ್ಲವಿ , ಧನುಶ್ರೀ , ಸಹನಾ , ಭೂಮಿಕಾ, ಪೂಜಾ , ಸಿಂಚನ , ನಮಿತಾ ಭಾಗವಹಿಸಿದ್ದರು.

ಪುರುಷ ವಿಭಾಗದ ಫೈನಲ್ ಪಂದ್ಯಾಟಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಏಳು ಜನ ವಿದ್ಯಾರ್ಥಿಗಳನ್ನು ಹೊಂದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಹಾಸನ ಜಿಲ್ಲೆಯನ್ನು ಎದುರಿಸಿ ದ್ವಿತೀಯ ಸ್ಥಾನವನ್ನು ಪಡೆಯಿತು. ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಾದ ಮಣಿಕಂಠ, ಗಣೇಶ , ಮನೋಜ , ಪ್ರವೀಣ್, ಕೀರ್ತನ್, ಶಯಾನ್ ಮತ್ತು ರಾಹುಲ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಪ್ರಶಸ್ತಿ ವಿಜೇತ ಮಹಿಳಾ ಹಾಗು ಪುರುಷರ‌ ನೆಟ್ ಬಾಲ್ ತಂಡಕ್ಕೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪೂಜಾರಿ ತರಬೇತಿಯನ್ನು ನೀಡಿರುತ್ತಾರೆ.

Related posts

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!