23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧಮ೯ಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ವರದಿಯ ಆದೇಶ ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ಸಲ್ಲಿಸಿದ ವರದಿಯ ಆದೇಶ ಡಿ.26 ಕ್ಕೆ ನಿಗದಿಪಡಿಸಲಾಗಿತ್ತು. ಇಂದು ಮತ್ತೆ ನ್ಯಾಯಾಲಯ ಆದೇಶವನ್ನು ಡಿ.29ಕ್ಕೆ ಮುಂದೂಡಿದೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು ವರದಿಯನ್ನು (u/s)215 ಅಡಿಯಲ್ಲಿ ಸಲ್ಲಿಸಿದ್ದು,
ಚಿನ್ನಯ್ಯ , ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತ ಭಟ್ ಆರೋಪಿಗಳೆಂದು ಉಲ್ಲೇಖಿಸಲಾಗಿದೆ.

ಈ ವರದಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಅವರು ವಿಚಾರಣೆ ನಡೆಸಿ ಡಿ.26 ರಂದು ಆದೇಶ ನಿಗದಿಪಡಿಸಿದ್ದರು. ಆದ್ರೆ ಡಿ.26 ರಂದು ಮತ್ತೆ ಡಿ.29 ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಉಜಿರೆಯ ಗಣೇಶ್ ಶೆಟ್ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಇಬ್ಬರ ಮೊಬೈಲ್ ಎಸ್ಐಟಿ ವಶಕ್ಕೆ ಪಡೆದುಕೊಂಡಿತ್ತು. ಈ ಇಬ್ಬರ ಮೊಬೈಲ್ ಬಿಡುಗಡೆ ಮಾಡಿಸಲು ಬೆಳ್ತಂಗಡಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಡಿ.24 ರಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಅರ್ಜಿಯ ಆದೇಶವನ್ನು ಡಿ.29 ಕ್ಕೆ ಮುಂದೂಡಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya
error: Content is protected !!