July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

ನಾವೂರು: ನಾವೂರು ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ.26 ರಂದು ನಾವೂರು ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು.

ಕುಡಿಯುವ ನೀರಿನ ದರ ಹೆಚ್ಚಳ ಮಾಡಲಾಗಿದೆ ಇದರಿಂದ ಜನಸಾಮಾನ್ಯರಿಗೆ ಆರ್ಥಿಕವಾಗಿ ಹೊಡೆತ ಬೀಳುತ್ತದೆ ಎಂದು ಗ್ರಾಮಸ್ಥರು ಹೇಳಿದಾಗ ಇಲಾಖೆಯ ನಿರ್ದೇಶನದಂತೆ ಕ್ರಮ ವಹಿಸಲಾಗಿದೆ ಎಂದು ಪಿಡಿಒ ತಿಳಿಸಿದರು. ನೀರು ಸರಬರಾಜುನಲ್ಲಿ ನಿರ್ವಹಣೆಗೆ ಮುಂದೆ ಸರ್ಕಾರದಿಂದ ಹಣ ಬರುತ್ತದೆ. 10-25 ಲೀಟರ್ ನೀರಿನ ದರ ದಾಟಿದಾಗ ಲೀಟರ್ ಗೆ 2 ರೂಪಾಯಿ ಶುಲ್ಕ ನಿಗದಿ ಪಡಿಸಿ, ಬೇರೆ ಬೇರೆ ಚಟುವಟಿಕೆಗಳಿಗೆ ಬಳಸುವವರಿಗೆ ಕಡಿವಾಣ ಹಾಕಲು ಕ್ರಮ ವಹಿಸಲು ನಿರ್ದೇಶನ ನೀಡಲಾಗಿದೆ ಎಂದು ಇಓ ಹೇಳಿದರು.

ಜೆಜೆಎಂ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ, ಕುಡಿಯುವ ನೀರಿನ ಪಂಪ್ ಹೌಸ್‌ಗೆ‌ ಸರಬರಾಜು ಆಗುತ್ತಿರುವ ವಿದ್ಯುತ್ ಮೌಲ್ಯವನ್ನು ಕಡಿಮೆಗೊಳಿಸಬೇಕು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಅರಣ್ಯವಾಸಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಗ್ರಾಮಸ್ಥರು ಹೇಳಿದಾಗ ವನ್ಯಜೀವಿ ಅರಣ್ಯ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದರು. ನಾಲ್ಕು ಸಬ್ ಸ್ಟೇಷನ್ ನಿರ್ಮಾಣದ ತಾಲೂಕಿನಲ್ಲಿ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಬೆಳೆ ವಿಮೆ ಸಮರ್ಪಕವಾಗಿ ಫಲಾನುಭವಿಗಳಿಗೆ ಜಮೆಯಾಗಿಲ್ಲ. ಮಳೆ ಮಾಪನ ನಿರ್ವಹಣೆಯ ಹೊಣೆ ಯಾರದ್ದು ಎಂದು ಗ್ರಾಮಸ್ಥರು ಅಧಿಕಾರಿಗಳನ್ನು ಪ್ರಶ್ನಿಸಿದರು. ಬೆಳೆ ವಿಮೆ ಈಗಾಗಲೇ 70 ಕೋಟಿ ರೂಪಾಯಿ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ. ತಾಲೂಕಿನಲ್ಲಿ ಯಾವುದೇ ಮಳೆಮಾಪನದ ಸಮಸ್ಯೆ ಇಲ್ಲ, ಕಳೆದ ಬಾರಿ ಸರಿಯಾಗಿ ಮಳೆ ಮಾಪನ ನಮ್ಮಲ್ಲಿ ಆಗಿದ್ದು ರೈತರಿಗೆ ವಿಮೆ ಮೊತ್ತ ಜಮೆಯಾಗಿದೆ ವಿಮಾ ಕಂಪೆನಿಗೆ ಸೂಕ್ತ ಕ್ರಮ ವಹಿಸಲು ನಿರ್ದೇಶನ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.

ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಎರ್ಮಾಳ ಎಂಬಲ್ಲಿ ಅರಣ್ಯವಾಸಿಗಳಿಗೆ ಯಾವುದೇ ಭೂ ದಾಖಲೆಗಳು ಆಗುತ್ತಿಲ್ಲ , ಎರಡು ಗ್ರಾಮದ ಗಡಿಯ ಮಧ್ಯೆಯಲ್ಲಿ ಅವರು ವಾಸಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಶಾಸಕರು ತಹಶೀಲ್ದಾರ್ ಗೆ‌ ಸೂಚನೆ ನೀಡಿದರು.

ಕೃಷಿ ಭೂಮಿಗೆ ಪ್ರಾಣಿಗಳ ಉಪಟಳವಿದೆ. ಕೊವಿ ಪರವಾನಿಗೆ ನೀಡಲು ಅನುಮತಿ ನೀಡುವಂತೆ ಸಾರ್ವಜನಿಕರು ಹೇಳಿದಾಗ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 10 ಕಿಮೀ ದೂರದಲ್ಲಿ ಪರವಾನಿಗೆ ನೀಡಲು ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆದುಕೊಳ್ಳಬೇಕು ಎಂದು ಅರಣ್ಯಾಧಿಕಾರಿಗಳು ತಿಳಿಸಿದರು. ಸಾರ್ವಜನಿಕ ಆಟ ಮೈದಾನ ಜಾಗ ಕಾಯ್ದಿರಿಸುವ ಬೇಕು ಎಂದು ನಾಗರೀಕರು ಹೇಳಿದರು.

ಶಾಲೆಯ ಯಾವುದೇ ಕೊಠಡಿ ನಿರ್ಮಾಣಕ್ಕೆ ಕಳೆದ ಎರಡು ವರ್ಷದಲ್ಲಿ ಅನುದಾನ ಬಂದಿಲ್ಲ. ಹಿಂದಿನ ಸರ್ಕಾರ ವಿವೇಕ ಶಾಲಾ ಕೊಠಡಿ ಯೋಜನೆಯ ಮೂಲಕ ತಾಲೂಕಿನಲ್ಲಿ ನಾನಾ ಶಾಲೆಗಳಲ್ಲಿ ಕೊಠಡಿ ನಿರ್ಮಾಣವಾಗಿದೆ ಆದರೆ ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆ ಯೋಜನೆಯನ್ನು ಕೈ ಬಿಟ್ಟಿದೆ, ಈಗಾಗಲೇ 6 ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ, ಕೆಪಿಎಸ್ ಶಾಲೆ ನಿರ್ಮಾಣದ ಕುರಿತು ಕ್ರಮ ವಹಿಸುವುದಾಗಿ ಶಾಸಕರು ತಿಳಿಸಿದರು.

ರೈತರಿಗೆ ವಿನಾಯಿತಿ ಬಡ್ಡಿ ದರದ ಸಾಲದ ಮೊತ್ತವನ್ನು ಹೆಚ್ಚಿಸಬೇಕು. ಶಾಲಾ ಆವರಣದ ಬಳಿ ಸೋಲಾರ್ ಬೇಲಿ ಅಳವಡಿಸಿದ್ದು ಇದರಿಂದ ಅನಾಹುತ ಸಂಭವಿಸುತ್ತಿದ್ದ ಅದನ್ನು ತೆರವುಗೊಳಿಸಬೇಕು ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದನೆ ಸಿಕ್ಕಿಲ್ಲ ಎಂದು ಗ್ರಾಮಸ್ಥರು ಹೇಳಿದಾಗ ಸಚಿವರಿಗೆ ಮನವಿ ಸಲ್ಲಿಸುವುದಾಗಿ ಶಾಸಕರು ತಿಳಿಸಿದರು. ಬೇಲಿ ತೆರವು ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ತಿಳಿಸಿದರು.

ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ 157, 162 ಸರ್ವೇ ನಂಬರ್ ನಲ್ಲಿ ಪ್ಲಾಟಿಂಗ್ ನಡೆಸಬೇಕು ಎಂದು ಗ್ರಾಮಸ್ಥರು ಹೇಳಿದರು.

ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತಾ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಜೆ. , ಸದಸ್ಯರು, ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya
error: Content is protected !!