September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ: ಲಾಯಿಲದಿಂದ ಬೆಳ್ತಂಗಡಿ ನಗರ ಸಂಪರ್ಕಿಸುವ ನಾಗರಿಕರ ಬಹು ವರ್ಷಗಳ ಬೇಡಿಕೆಯಾದ ಮಠದಬೈಲು ಎಂಬಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಡಿ.26 ರಂದು ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು.

ಸುಮಾರು 35 ಲಕ್ಷ ರೂಪಾಯಿ ವೆಚ್ಚದಲ್ಲಿ ಕನ್ನಾಜೆ ಕಾಲು ಸಂಕ ನಿರ್ಮಾಣಗೊಳ್ಳಲಿದ್ದು ಕಾಯಿಲೆ, ಮೇಲಂತಬೆಟ್ಟು, ಸವಣಾಲು ಸೇರಿದಂತೆ ಹಲವು ಗ್ರಾಮಗಳನ್ನು ಬೆಸೆಯಲಿದೆ. ಈ ಯೋಜನೆ ಕುರಿತು ಜನರ ಬಹು ವರ್ಷಗಳ ಬೇಡಿಕೆಯಾಗಿದೆ. ಇಲಾಖೆ ಮಧ್ಯೆ ಸಂಪರ್ಕ ರಸ್ತೆ ನಿರ್ಮಾಣ ಮಾಡಲು ಅವಕಾಶ ಮಾಡಿಕೊಟ್ಟರು ಮಾಜಿ ಸಿಎಂ ಯಡಿಯೂರಪ್ಪನವರು. ಅಭಿವೃದ್ಧಿಗೆ ಸರ್ಕಾರ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ ಎಂದು ಹೇಳಿದರು.

ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಪ್ರಮುಖರಾದ ಈಶ್ವರ ಬೈರ, ಯೋಗೀಶ್ ಬಿಢೆ,ದಯಾನಂದ ಶೆಟ್ಟಿ ಕನ್ನಾಜೆ ,ಗಣೇಶ್ ಸಪಲ್ಯ, ರುಕ್ಮಯ ಕನ್ನಾಜೆ, ಸುಧಾಕರ್ ಬಿ.ಎಲ್. ಸೇರಿದಂತೆ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.ಗಿರೀಶ್ ಡೋಂಗ್ರೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಗಣೇಶ್ ಆರ್ ಧನ್ಯವಾದವಿತ್ತರು.

Related posts

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ ; ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!