March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಜನಸ್ಪಂದನ ಸಭೆ

ಡಿಡುಪೆ: ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ.26 ರಂದು ಶಾಲಾ ವಠಾರದಲ್ಲಿ ನಡೆಯಿತು.

ಮುಂಡಾಜೆ – ಕಜಕ್ಕೆ ರಸ್ತೆ ದುರಸ್ತಿಗೊಳಿಸಬೇಕು ಹಾಗೆಯೇ ಕಾಜೂರು-ಕಜಕ್ಕೆ ರಸ್ತೆ ಕಿರಿದಾಗಿದ್ದು ಅಗಲೀಕರಣಗೊಳಿಸಬೇಕು ಎಂದು ಗ್ರಾಮಸ್ಥರು ಹೇಳಿದರು.

ಡಿಡುಪೆ – ಎಳನೀರು ಮುಂದುವರಿದ 5 ಕಿಮೀ ರಸ್ತೆಯನ್ನು ನಿರ್ಮಾಣಗೊಳಿಸಬೇಕು. ಈಗಾಗಲೇ 3 ಕಿಮೀ ರಸ್ತೆ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಹೇಳಿದಾಗ ಈಗಾಗಲೇ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸಲಾಗಿದ್ದು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಹಲವಾರು ಬಾರಿ ಈ ರಸ್ತೆಯ ನಿರ್ಮಾಣದಲ್ಲಿ ಪ್ರಯತ್ನಿಸುತ್ತಿದ್ದೇನೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಅಧಿಕಾರಿಗಳು ಸ್ಪಂದನೆ ನೀಡುತ್ತಿದ್ದಾರೆ ಎಂದು ಶಾಸಕರು ತಿಳಿಸಿದರು.

ಅರಣ್ಯದಂಚಿನದಲ್ಲಿರುವ ಕರಿಯಾಲು ಭಾಗದಲ್ಲಿ 10ಕ್ಕೂ ಮಿಕ್ಕಿ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ ಎಂದು ಗ್ರಾಮಸ್ಥರು ಹೇಳಿದಾಗ ಇಲಾಖೆಯಲ್ಲಿ ಕಡತದ ಪರಿಶೀಲನೆ ಹಂತದಲ್ಲಿದೆ ಎಂದು ಶಾಸಕರು ತಿಳಿಸಿದರು. ಬಂಗಾರಪಲ್ಕೆ ಎಂಬಲ್ಲಿ 10 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಮಾಡಬೇಕು ಎಂದು ಮೆಸ್ಕಾಂ ಇಲಾಖೆಗೆ ಶಾಸಕರು ಸೂಚಿಸಿದರು. ಎಳನೀರು, ಗುತ್ಯಡ್ಕ ಭಾಗದಲ್ಲಿ ಕಳೆದ 75 ವರ್ಷಗಳಿಂದ ವಿದ್ಯುತ್ ಸೌಲಭ್ಯ ಕಾಣದ ನಮಗೆ ಬೆಳಕು ಹರಿಸಿದ್ದು ಶಾಸಕ ಹರೀಶ್ ಪೂಂಜ ಎಂದು ಗ್ರಾಮಸ್ಥರು ಅವರನ್ನು ಅಭಿನಂದಿಸಿದರು.

ರಸ್ತೆ ಅಭಿವೃದ್ಧಿ ಅವಕಾಶ ಕಲ್ಪಿಸಿವುದಾದರೆ ಸೂಕ್ಷ್ಮ ವಲಯ ಅರಣ್ಯಕ್ಕೆ ಸಮ್ಮತ ಸೂಚಿಸುತ್ತೇವೆ ಎಂದು ಗ್ರಾಮಸ್ಥರು ಹೇಳಿದರು. ಅರಣ್ಯ ಇಲಾಖೆಯ ಪ್ರವಾಸಿ ತಾಣಕ್ಕೆ ಸುಂಕ ವಸೂಲಿ ಮಾಡಲಾಗುತ್ತಿದೆ ಆದರೆ ಇದರಿಂದ ಪಂಚಾಯತ್ ಗೆ ಯಾವುದೇ ಲಾಭವಿಲ್ಲ, ಸ್ವಲ್ಪ ಅಂಶವನ್ನು ಪಂಚಾಯತ್ ಅಭಿವೃದ್ಧಿಗೆ ನೀಡಬೇಕು ಎಂದು ಗ್ರಾಮಸ್ಥರು ಹೇಳಿದಾಗ ಈ ಪ್ರಕ್ರಿಯೆ ಸರ್ಕಾರ ಹಂತದಲ್ಲಿ ಆಗಬೇಕು, ವಿಧಾನ ಸಭೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುವುದಾಗಿ ಶಾಸಕರು ತಿಳಿಸಿದರು. ಅಲ್ಲದೇ ಪ್ರವಾಸಿ ತಾಣ ನೇತ್ರಾವತಿ ಪೀಕ್ ಪ್ರವೇಶಿಸಿಸಲು ಪಂಚಾಯತ್ ರಸ್ತೆ ಬಳಕೆಯಾಗುತ್ತದೆ ಇದಕ್ಕೆ ಅನುಗುಣವಾಗಿ ಪಂಚಾಯತ್ 100 ರೂ ಸುಂಕ ವಸೂಲಿ ಮಾಡಬೇಕು ಈ ಬಗ್ಗೆ ಐಬಿಯಲ್ಲಿ ತಹಶೀಲ್ದಾರ್, ಇಓ, ಆರ್ ಎಫ್ ಓ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಶಾಸಕರು ಹೇಳಿದರು.

ನೆಟ್ವರ್ಕ್ ಸಮಸ್ಯೆ, ಸೇತುವೆ, ರಸ್ತೆ ನಿರ್ಮಾಣ ಬೇಡಿಕೆ ಗ್ರಾಮಸ್ಥರು ತಿಳಿಸಿದರು. ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ, ಅಧ್ಯಕ್ಷ ಪ್ರಕಾಶ್ ಜೈನ್, ಉಪಾಧ್ಯಕ್ಷೆ ರೋಹಿಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ, ಸದಸ್ಯರು ಇಲಾಖಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya
error: Content is protected !!