25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

ಉಜಿರೆ, : ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಆಫ್ ನೆಕರ್ನಾಟಕ ಮತ್ತು GAT ಕ್ಯಾಂಪಸ್ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಆರನೇ ಆವೃತ್ತಿಯ ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳ ತಂಡವು ಪುರುಷರ ವಿಭಾಗ ಮತ್ತು ಮಹಿಳಾ ವಿಭಾಗದಲ್ಲೂ ಪ್ರಶಸ್ತಿಯನ್ನು ಪಡೆಯುವುದರ ಮೂಲಕ ಪಂದ್ಯಾಟದಲ್ಲಿ ಮೊದಲ ಬಾರಿ ಚಾಂಪಿಯನ್ ಗಳಾಗಿ ಹೊರ ಹೊಮ್ಮಿದ್ದಾರೆ.

ಫೈನಲ್ ಹಂತದ ಮಹಿಳೆಯರ ನೆಟ್ ಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಬೆಂಗಳೂರು ಸಿಟಿ ತಂಡವನ್ನು ಮಣಿಸುವ ಮೂಲಕ ಪ್ರಥಮ ಸ್ಥಾನವನ್ನು ಪಡೆಯಿತು. ಜಿಲ್ಲೆಯನ್ನು ಪ್ರತಿನಿಧಿಸಿದ ಮಹಿಳಾ ತಂಡದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ 10 ಜನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಪ್ರಶಸ್ತಿ ವಿಜೇತ ತಂಡದಲ್ಲಿ ವಿದ್ಯಾರ್ಥಿಗಳಾದ ವರ್ಷಿತ, ರಶ್ಮಿ , ಸುರಕ್ಷಾ , ಪಲ್ಲವಿ , ಧನುಶ್ರೀ , ಸಹನಾ , ಭೂಮಿಕಾ, ಪೂಜಾ , ಸಿಂಚನ , ನಮಿತಾ ಭಾಗವಹಿಸಿದ್ದರು.

ಪುರುಷ ವಿಭಾಗದ ಫೈನಲ್ ಪಂದ್ಯಾಟಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಏಳು ಜನ ವಿದ್ಯಾರ್ಥಿಗಳನ್ನು ಹೊಂದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಹಾಸನ ಜಿಲ್ಲೆಯನ್ನು ಎದುರಿಸಿ ದ್ವಿತೀಯ ಸ್ಥಾನವನ್ನು ಪಡೆಯಿತು. ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಾದ ಮಣಿಕಂಠ, ಗಣೇಶ , ಮನೋಜ , ಪ್ರವೀಣ್, ಕೀರ್ತನ್, ಶಯಾನ್ ಮತ್ತು ರಾಹುಲ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಪ್ರಶಸ್ತಿ ವಿಜೇತ ಮಹಿಳಾ ಹಾಗು ಪುರುಷರ‌ ನೆಟ್ ಬಾಲ್ ತಂಡಕ್ಕೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪೂಜಾರಿ ತರಬೇತಿಯನ್ನು ನೀಡಿರುತ್ತಾರೆ.

Related posts

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!