23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

ಉಜಿರೆ, : ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಆಫ್ ನೆಕರ್ನಾಟಕ ಮತ್ತು GAT ಕ್ಯಾಂಪಸ್ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಆರನೇ ಆವೃತ್ತಿಯ ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳ ತಂಡವು ಪುರುಷರ ವಿಭಾಗ ಮತ್ತು ಮಹಿಳಾ ವಿಭಾಗದಲ್ಲೂ ಪ್ರಶಸ್ತಿಯನ್ನು ಪಡೆಯುವುದರ ಮೂಲಕ ಪಂದ್ಯಾಟದಲ್ಲಿ ಮೊದಲ ಬಾರಿ ಚಾಂಪಿಯನ್ ಗಳಾಗಿ ಹೊರ ಹೊಮ್ಮಿದ್ದಾರೆ.

ಫೈನಲ್ ಹಂತದ ಮಹಿಳೆಯರ ನೆಟ್ ಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಬೆಂಗಳೂರು ಸಿಟಿ ತಂಡವನ್ನು ಮಣಿಸುವ ಮೂಲಕ ಪ್ರಥಮ ಸ್ಥಾನವನ್ನು ಪಡೆಯಿತು. ಜಿಲ್ಲೆಯನ್ನು ಪ್ರತಿನಿಧಿಸಿದ ಮಹಿಳಾ ತಂಡದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ 10 ಜನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಪ್ರಶಸ್ತಿ ವಿಜೇತ ತಂಡದಲ್ಲಿ ವಿದ್ಯಾರ್ಥಿಗಳಾದ ವರ್ಷಿತ, ರಶ್ಮಿ , ಸುರಕ್ಷಾ , ಪಲ್ಲವಿ , ಧನುಶ್ರೀ , ಸಹನಾ , ಭೂಮಿಕಾ, ಪೂಜಾ , ಸಿಂಚನ , ನಮಿತಾ ಭಾಗವಹಿಸಿದ್ದರು.

ಪುರುಷ ವಿಭಾಗದ ಫೈನಲ್ ಪಂದ್ಯಾಟಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಏಳು ಜನ ವಿದ್ಯಾರ್ಥಿಗಳನ್ನು ಹೊಂದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಹಾಸನ ಜಿಲ್ಲೆಯನ್ನು ಎದುರಿಸಿ ದ್ವಿತೀಯ ಸ್ಥಾನವನ್ನು ಪಡೆಯಿತು. ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಾದ ಮಣಿಕಂಠ, ಗಣೇಶ , ಮನೋಜ , ಪ್ರವೀಣ್, ಕೀರ್ತನ್, ಶಯಾನ್ ಮತ್ತು ರಾಹುಲ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಪ್ರಶಸ್ತಿ ವಿಜೇತ ಮಹಿಳಾ ಹಾಗು ಪುರುಷರ‌ ನೆಟ್ ಬಾಲ್ ತಂಡಕ್ಕೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪೂಜಾರಿ ತರಬೇತಿಯನ್ನು ನೀಡಿರುತ್ತಾರೆ.

Related posts

ಏ.9: ನಾವರದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯಿಂದ “ನಾಗರತಿ” ಯಕ್ಷಗಾನ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!