September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

ಬೆಳ್ತಂಗಡಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ 1971ರ ಇಂಡೋ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ವೀರ ಯೋಧ ಸಿ ಜಾರ್ಜ್ ಕುಟ್ಟಿ ಅವರನ್ನು ಧರ್ಮಸ್ಥಳ ಗ್ರಾಮದ ಅವರ ಮನೆಗೆ ತೆರಳಿ ಸನ್ಮಾಸಲಾಯಿತು.

ಧರ್ಮಸ್ಥಳ ಸೈಂಟ್ ಜೊಸೆಫ್ ಚರ್ಚ್‌ನ ಧರ್ಮ ಗುರುಗಳಾದ ಫಾ. ಜೋಸೆಫ್ ವಾಳೂಕಾರನ್ ಮಾತನಾಡಿ ದೇಶ ಕಟ್ಟುವ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ. ದೇಶದ ಒಳಿತಿಗಾಗಿ ತಮ್ಮ ಜೀವನವನ್ನು ಮೀಸಲಿಟ್ಟವರು ಸೈನಿಕರು ಅವರನ್ನು ಗೌರವಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಭಾರತದ ಪರ ಯುದ್ದದಲ್ಲಿ ಭಾಗವಹಿಸಿ ದೇಶದ ಗೆಲುವಿಗೆ ಶ್ರಮಿಸಿದವರನ್ನು ಇಂದು ಗೌರವಿಸುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಗೋಪಾಲಕೃಷ್ಣ ಕಾಂಚೋಡು ಮಾತನಾಡಿ ಸಂಘಟನೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದು ಮಾಜಿ ಸೈನಿಕರನ್ನು ಸಂಘಟಿಸುವ ಕಾರ್ಯ ಮಾಡುತ್ತಿದೆ ಹಾಗೂ ಮಾಜಿ ಸೈನಿಕರ ಪರವಾಗಿ ಕೆಲಸ ಮಾಡುತ್ತಿದೆ ಎಂದರು ಜಿಲ್ಲಾ ಸಮ್ಮೇಳನದ ಸಂದರ್ಭದಲ್ಲಿ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಅವರಿಗೆ ಭಗವಹಿಸಲು ಸಾಧ್ಯವಾಗದ ಕಾರಣ ಇಂದು ಅವರ ಮನೆಗೆ ಬಂದು ಸನ್ಮಾನಿಸುವ ಕಾರ್ಯ ಮಾಡಿದ್ದೇವೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಅವರು 1964 ರಲ್ಲಿ ಸೇನೆಗೆ ಸೇರ್ಪಡೆಯಾಗಿ ೨೨ವರ್ಷಗಳ ಕಾಲ ಸೇವೆ ಸಲ್ಲಿಸಿರುವುದಾಗಿ ತಿಳಿಸಿ ಇಂಡೋ ಪಾಕ್ ಯುದ್ದದ ದಿನಗಳನ್ನು ನೆನೆದುಕೊಂಡರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಎನ್.ಪಿ ತಂಗಚ್ಚನ್, ತಾಲೂಕು ಕಾರ್ಯದರ್ಶಿ ಸುರೇಶ್ ಗೌಡ, ಜಿಲ್ಲಾ ಕೋಶಾಧಿಕಾರಿ ಚಂದಪ್ಪ ಡಿ.ಎಸ್. ಜಿಲ್ಲಾ ಸಲಹೆಗಾರ ಹರೀಶ್ ರೈ, ತಾಲೂಕು ಉಪಾಧ್ಯಕ್ಷ ರವಿಪ್ರಸಾದ್, ತಾಲೂಕು ಸಮಿತಿಯ ಗೌರವಾಧ್ಯಕ್ಷ ಎ.ಜೆ ಮಾಣಿ, ಗೌರವ ಸಲಹೆಗಾರ ಜೋಸೆಫ್ ಎನ್.ಕೆ, ಸಿ ಜಾರ್ಜ್ ಕುಟ್ಟಿ ಅವರ ಪುತ್ರ ನಿವೃತ್ತ ಸೈನಿಕ ರಾಜೇಶ್, ನಿವೃತ್ತ ಸೈನಿಕರ ಕುಟುಂಬಸ್ಥರು ಹಾಗೂ ಇತರರು ಇದ್ದರು.

Related posts

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ ಸ್ವಾತಂತ್ರೋತ್ಸವ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya
error: Content is protected !!