25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಪಿ ಎಂ ಶ್ರೀ ಯೋಜನೆಯಡಿಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮದಡಿಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳು ಎಂಬ ವಿಷಯದ ಬಗ್ಗೆ ನಮ್ಮ ಶಾಲಾ ಹಿರಿಯ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಖ್ಯಾತ ವಕೀಲರಾದ ಶ್ರೀಯುತ ಬಿ.ಕೆ ಧನಂಜಯ ರಾವ್ ಮಾಹಿತಿಯನ್ನು ನೀಡಿದರು.

ನಮಗೆ ಸಂವಿಧಾನ ನೀಡಿರುವ ಹಕ್ಕುಗಳಿಗೆ ಎಷ್ಟೋ ಪ್ರಾಮುಖ್ಯತೆ ಇದೆಯೋ ಅಷ್ಟೇ ಪ್ರಾಮುಖ್ಯವಾದೇ ನಾಗರಿಕ ಕರ್ತವ್ಯಗಳು ಇದೆ. ನಾವು ನೆಲ, ಜಲ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ, ವನ್ಯ ಜೀವಿಗಳ ರಕ್ಷಣೆ, ಸಾರ್ವಜನಿಕ ಸಂಪತ್ತುಗಳ ರಕ್ಷಣೆ ಮತ್ತು ದೇಶ ಕಾಯುವ ಸೈನಿಕರಿಗೆ ಗೌರವ ಹಾಗೂ ಭಾಷೆ, ಸಂಸ್ಕೃತಿ, ಧಾರ್ಮಿಕ ಆಚರಣೆಗಳನ್ನು ಉಳಿಸುವ ಕಾರ್ಯವನ್ನು ಮಾಡುವಂತೆ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ವಿವರಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಝಮೀರುದ್ದೀನ್, ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ ಪುತ್ತೂರಾಯ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನೀನಾ ಕುಮಾರ್ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya
error: Content is protected !!