25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಪಿ ಎಂ ಶ್ರೀ ಯೋಜನೆಯಡಿಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮದಡಿಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳು ಎಂಬ ವಿಷಯದ ಬಗ್ಗೆ ನಮ್ಮ ಶಾಲಾ ಹಿರಿಯ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಖ್ಯಾತ ವಕೀಲರಾದ ಶ್ರೀಯುತ ಬಿ.ಕೆ ಧನಂಜಯ ರಾವ್ ಮಾಹಿತಿಯನ್ನು ನೀಡಿದರು.

ನಮಗೆ ಸಂವಿಧಾನ ನೀಡಿರುವ ಹಕ್ಕುಗಳಿಗೆ ಎಷ್ಟೋ ಪ್ರಾಮುಖ್ಯತೆ ಇದೆಯೋ ಅಷ್ಟೇ ಪ್ರಾಮುಖ್ಯವಾದೇ ನಾಗರಿಕ ಕರ್ತವ್ಯಗಳು ಇದೆ. ನಾವು ನೆಲ, ಜಲ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ, ವನ್ಯ ಜೀವಿಗಳ ರಕ್ಷಣೆ, ಸಾರ್ವಜನಿಕ ಸಂಪತ್ತುಗಳ ರಕ್ಷಣೆ ಮತ್ತು ದೇಶ ಕಾಯುವ ಸೈನಿಕರಿಗೆ ಗೌರವ ಹಾಗೂ ಭಾಷೆ, ಸಂಸ್ಕೃತಿ, ಧಾರ್ಮಿಕ ಆಚರಣೆಗಳನ್ನು ಉಳಿಸುವ ಕಾರ್ಯವನ್ನು ಮಾಡುವಂತೆ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ವಿವರಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಝಮೀರುದ್ದೀನ್, ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ ಪುತ್ತೂರಾಯ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನೀನಾ ಕುಮಾರ್ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

Related posts

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya
error: Content is protected !!