July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ: ಸಹಕಾರ ಸಂಘದ ಅಭಿವೃದ್ಧಿಗೆ ಕಾರಣೀಕರ್ತರಾದ ಸಹೃದಯ ಸದಸ್ಯರು ಮತ್ತು ಗ್ರಾಹಕ ಬಾಂಧವರ ಸಮ್ಮಿಲನ ಕಾರ್ಯಕ್ರಮದೊಂದಿಗೆ, ನಡೆದು ಬಂದ ಹಾದಿಯ ಮೆಲುಕು ಹಾಕುವ ಹೆಜ್ಜೆಗುರುತು ಕಾರ್ಯಕ್ರಮವು ಕೇಂದ್ರ ಕಛೇರಿಯ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಸಭಾಭವನದಲ್ಲಿ ಡಿ 27 ರಂದು ನಡೆಯಿತು.

ಸಂಸ್ಥೆಯ ಪ್ರಗತಿಯ ಪಯಣದಲ್ಲಿ ಹಿಂದಿನ‌ ಪ್ರತಿ ಹೆಜ್ಜೆಗಳತ್ತ ಒಂದು ನೋಟವನ್ನು ಬಿರುವ ವಿಶೇಷ ಪ್ರಯತ್ನದ ಅಂಗವಾಗಿ ಸಂಘದ ಗ್ರಾಹಕರೊಂದಿಗೆ ಚರ್ಚಿಸಲಾಯಿತು.
26 ಶಾಖೆಗಳು, 100ಕ್ಕೂ ಹೆಚ್ಚು ಸಿಬ್ಬಂದಿಗಳು, ರೂ.ರೂ 287 ಕೋಟಿ ಠೇವಣಿ, ರೂ 1404 ಕೋಟಿ ವ್ಯವಹಾರ, ರೂ 4.84 ಕೋಟಿ ಲಾಭವನ್ನು ಸಂಸ್ಥೆ ಗಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ‌ ಸಂಘದ ಅಧ್ಯಕ್ಷ ಭಗೀರಥ ಜಿ ವಹಿಸಿ ದೀಪ ಪ್ರಜ್ವಲನೆ ನೇರವೇರಿಸಿ ಮಾತನಾಡಿ ಗ್ರಾಹಕರ ಮಿತ್ರರ ಸಹಕಾರದಿಂದ ಶ್ರೀ ಗುರುದೇವ ಸೊಸೈಟಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.ಮುಂದಿನ ದಿನಗಳಲ್ಲಿ ಇನ್ನೂ 5 ಸಂಘದ ಸಂಸ್ಥೆಗಳನ್ನು ಪ್ರಾರಂಭಿಸಲಿದ್ದೇವೆ ಎಂದರು.

ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಗಂಗಾಧರ ಮಿತ್ತಮಾರು,ಚಿದಾನಂದ ಪೂಜಾರಿ ಎಲ್ದಕ್ಕ, ಚಂದ್ರಶೇಖರ್, ಶ್ರೀಮತಿ ತನುಜಾ ಶೇಖರ್, ಧರಣೇಂದ್ರ ಕುಮಾರ್, ಸೂರಜ್ ಕುಮಾರ್, ವಿಶೇಷಾಧಿಕಾರಿ ಯಂ.ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್, ನಿರ್ದೆಶಕರಾದ ಹೆಚ್ ಧರ್ಣಪ್ಪ ಪೂಜಾರಿ ಉಪಸ್ಥಿತರಿದ್ದರು.

ದೈನಿಕ ಸಂಗ್ರಹಕ ವಿಶ್ವನಾಥ ಪ್ರಾರ್ಥನೆ ಹಾಡಿದರು. ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya
error: Content is protected !!