July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

ಬೆಳ್ತಂಗಡಿ: ಬೈಕ್‌ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕಾಡುಕೋಣ ದಾಳಿ ಮಾಡಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಲಾಲ ಗ್ರಾಮದಲ್ಲಿ ಡಿ.26ರಂದು ನಡೆದಿದೆ.

ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯವರ ಪುತ್ರ ಸುಕೇಶ್(31) ರವರು ಬೆಳ್ತಂಗಡಿ ಬೈಕ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಕರ್ತವ್ಯ ಮುಗಿಸಿ ರಾತ್ರಿ ಸುಮಾರು 8.45 ಕ್ಕೆ ಮನೆಗೆ ಹೋಗುತಿದ್ದ ವೇಳೆ ಲಾಲ ಗ್ರಾಮದ ಬೇಲಾಜೆ ಅಲೆಕ್ಕಿ ಎಂಬಲ್ಲಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ ಕಾಡಿನಿಂದ ರಸ್ತೆಗೆ ದಾಟಿಕೊಂಡು ಬಂದು ಸಂಚಾರಿಸುತ್ತಿದ್ದ ಬೈಕ್ ಮೇಲೆ ದಾಳಿ ಮಾಡಿದೆ.

ಈ ವೇಳೆ ಬೈಕ್ ಸವಾರ ಸುಕೇಶ್ ರವರ ಕಾಲು ಮತ್ತು ಕೈ ಗೆ ಗಂಭೀರ ಗಾಯವಾಗಿದ್ದು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡುಕೋಣ ದಾಳಿಗೆ ಬೈಕ್‌ಗೆ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಲಾಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಡಿ.೨೭ರಂದು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.

Related posts

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya
error: Content is protected !!