September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

ಬೆಳ್ತಂಗಡಿ: ಬೈಕ್‌ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕಾಡುಕೋಣ ದಾಳಿ ಮಾಡಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಲಾಲ ಗ್ರಾಮದಲ್ಲಿ ಡಿ.26ರಂದು ನಡೆದಿದೆ.

ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯವರ ಪುತ್ರ ಸುಕೇಶ್(31) ರವರು ಬೆಳ್ತಂಗಡಿ ಬೈಕ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಕರ್ತವ್ಯ ಮುಗಿಸಿ ರಾತ್ರಿ ಸುಮಾರು 8.45 ಕ್ಕೆ ಮನೆಗೆ ಹೋಗುತಿದ್ದ ವೇಳೆ ಲಾಲ ಗ್ರಾಮದ ಬೇಲಾಜೆ ಅಲೆಕ್ಕಿ ಎಂಬಲ್ಲಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ ಕಾಡಿನಿಂದ ರಸ್ತೆಗೆ ದಾಟಿಕೊಂಡು ಬಂದು ಸಂಚಾರಿಸುತ್ತಿದ್ದ ಬೈಕ್ ಮೇಲೆ ದಾಳಿ ಮಾಡಿದೆ.

ಈ ವೇಳೆ ಬೈಕ್ ಸವಾರ ಸುಕೇಶ್ ರವರ ಕಾಲು ಮತ್ತು ಕೈ ಗೆ ಗಂಭೀರ ಗಾಯವಾಗಿದ್ದು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡುಕೋಣ ದಾಳಿಗೆ ಬೈಕ್‌ಗೆ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಲಾಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಡಿ.೨೭ರಂದು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.

Related posts

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya
error: Content is protected !!