25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳು ಮತ್ತು ಆಲೋಚನೆಗಳನ್ನು ಪ್ರದರ್ಶಿಸುವ ಹಾಗೂ ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ, ನಾವೀನ್ಯತೆಯನ್ನು ಬೆಳೆಸುವ ಗುರಿಯೊಂದಿಗೆ ಶಾಲಾ ಅಟಲ್ ಟಿಂಕರಿಂಗ್ ಲ್ಯಾಬ್ ವಿಭಾಗದಿಂದ “ಎ.ಟಿ.ಎಲ್ ಫೆಸ್ಟ್ 2025” ಆಯೋಜಿಸಲಾಗಿತ್ತು. ಶಾಲಾ ವಿದ್ಯಾರ್ಥಿಗಳು ವಿವಿಧ ಕಾರ್ಯ ಯೋಜನೆಗಳನ್ನು ತಾವೇ ತಯಾರಿಸಿ ಪ್ರದರ್ಶನ ಏರ್ಪಡಿಸಿದ್ದರು.

ಉಜಿರೆ ಎಸ್.ಡಿ.ಎಮ್ ತಂತ್ರಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹಾಗೂ ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶ್ರೀ ಅಮರೇಶ ಹೆಬ್ಬಾರ್.ಎ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳ ಕಾರ್ಯ ಯೋಜನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿ ಶುಭಹಾರೈಸಿದರು.

ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶಿವರಾಜ್ ಹಾಗೂ ಚಿತ್ರದುರ್ಗ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕ ಸುನಿಲ್ ಪಿ.ಜೆ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿ ತೀರ್ಪು ನೀಡಿದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.

Related posts

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya
error: Content is protected !!