22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳು ಮತ್ತು ಆಲೋಚನೆಗಳನ್ನು ಪ್ರದರ್ಶಿಸುವ ಹಾಗೂ ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ, ನಾವೀನ್ಯತೆಯನ್ನು ಬೆಳೆಸುವ ಗುರಿಯೊಂದಿಗೆ ಶಾಲಾ ಅಟಲ್ ಟಿಂಕರಿಂಗ್ ಲ್ಯಾಬ್ ವಿಭಾಗದಿಂದ “ಎ.ಟಿ.ಎಲ್ ಫೆಸ್ಟ್ 2025” ಆಯೋಜಿಸಲಾಗಿತ್ತು. ಶಾಲಾ ವಿದ್ಯಾರ್ಥಿಗಳು ವಿವಿಧ ಕಾರ್ಯ ಯೋಜನೆಗಳನ್ನು ತಾವೇ ತಯಾರಿಸಿ ಪ್ರದರ್ಶನ ಏರ್ಪಡಿಸಿದ್ದರು.

ಉಜಿರೆ ಎಸ್.ಡಿ.ಎಮ್ ತಂತ್ರಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹಾಗೂ ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶ್ರೀ ಅಮರೇಶ ಹೆಬ್ಬಾರ್.ಎ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳ ಕಾರ್ಯ ಯೋಜನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿ ಶುಭಹಾರೈಸಿದರು.

ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶಿವರಾಜ್ ಹಾಗೂ ಚಿತ್ರದುರ್ಗ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕ ಸುನಿಲ್ ಪಿ.ಜೆ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿ ತೀರ್ಪು ನೀಡಿದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.

Related posts

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!