September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳು ಮತ್ತು ಆಲೋಚನೆಗಳನ್ನು ಪ್ರದರ್ಶಿಸುವ ಹಾಗೂ ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ, ನಾವೀನ್ಯತೆಯನ್ನು ಬೆಳೆಸುವ ಗುರಿಯೊಂದಿಗೆ ಶಾಲಾ ಅಟಲ್ ಟಿಂಕರಿಂಗ್ ಲ್ಯಾಬ್ ವಿಭಾಗದಿಂದ “ಎ.ಟಿ.ಎಲ್ ಫೆಸ್ಟ್ 2025” ಆಯೋಜಿಸಲಾಗಿತ್ತು. ಶಾಲಾ ವಿದ್ಯಾರ್ಥಿಗಳು ವಿವಿಧ ಕಾರ್ಯ ಯೋಜನೆಗಳನ್ನು ತಾವೇ ತಯಾರಿಸಿ ಪ್ರದರ್ಶನ ಏರ್ಪಡಿಸಿದ್ದರು.

ಉಜಿರೆ ಎಸ್.ಡಿ.ಎಮ್ ತಂತ್ರಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹಾಗೂ ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶ್ರೀ ಅಮರೇಶ ಹೆಬ್ಬಾರ್.ಎ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳ ಕಾರ್ಯ ಯೋಜನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿ ಶುಭಹಾರೈಸಿದರು.

ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶಿವರಾಜ್ ಹಾಗೂ ಚಿತ್ರದುರ್ಗ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕ ಸುನಿಲ್ ಪಿ.ಜೆ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿ ತೀರ್ಪು ನೀಡಿದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.

Related posts

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಕುಪ್ಪೆಟ್ಟಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ‘ಆಟಿದ ಐತ್ತಾರ’ ಮತ್ತು ಮಾಸಿಕ ಸಭೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!