July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2024-25 ನೇ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿವೇತನ ಬಿಡುಗಡೆ ಆಗಿದ್ದು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಹನ್ನೆರಡು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆದಿದ್ದಾರೆ.

ವಿದ್ಯಾರ್ಥಿಗಳಾದ ಸಾತ್ವಿಕ್ .ಪಿ. , ದೀಪ್ತಿ ಮುರಾರಿ ಭಟ್ , ಶ್ರೀನಿಧಿ ವಿ. ಶ್ರೀಧರ್ , ಕೆ. ಕ್ಷಮಾ , ಮಿಹಿರ್ ಕೇಳ್ಕರ್ , ಪ್ರಾಂಜಲಿ , ರಿತೇಶ್ ನಾಗರಾಜ್ ಪ್ರಭು , ಧೀಮಂತ್ ಮರಾಠೆ , ಅನನ್ಯ ಪಿ.ವಿ. , ನೀತಿ ಕೆ. ಪಿ. , ಸುಮೇಧಾ ಗಾಂವ್ಕರ್ , ಸಂಜನಾ ಡಿ.ಎಸ್. ಇವರಿಗೆ ತಲಾ ಆರು ಸಾವಿರ ರೂ.ಗಳಂತೆ ಒಟ್ಟು ಎಪ್ಪತ್ತೆರಡು ಸಾವಿರ ರೂ. ವಿದ್ಯಾರ್ಥಿವೇತನವು ಆವರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದೆ ಎಂದು ದೆಹಲಿಯ ಸೆಂಟ್ರಲ್ ಸಂಸ್ಕೃತ ಯೂನಿವರ್ಸಿಟಿಯಿಂದ ವರದಿ ಬಂದಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಪ್ರಾಚಾರ್ಯ ಪ್ರಮೋದ್ ಕುಮಾರ್ .ಬಿ. ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!