22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

ತೆಂಕಕಾರಂದೂರು ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ ಡಿ.26 ರಂದು ಮಡಂತ್ಯಾರು ವೇದಮೂರ್ತಿ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಗೊನೆ ಮುಹೂರ್ತ, ಸ್ವಸ್ತಿ ಪುಣ್ಯಾಹವಾಚನ, ಶ್ರೀ ಗಣಪತಿ ಹವನ, ಪಂಚವಿಂಶತಿ ಕಳಶ ಪೂಜೆ, ಸಹಸ್ರನಾಮಾರ್ಚನೆ ಸಹಿತ ಹಾಲು ಪಾಯಸ ಸೇವೆ, ನಾಗತಂಬಿಲ, ಪ್ರಧಾನ ಹೋಮ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ಗಣಪತಿ ಹಾಗೂ ದುರ್ಗೆ ಕಳಸ ಅಭಿಷೇಕ, ದೈವಗಳ ಕಲಶಾಭಿಷೇಕ, ಪಂಚಪರ್ವ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ದೇವರಿಗೆ ಮಹಾ ರಂಗಪೂಜೆ, ದೈವಗಳಿಗೆ ಪರ್ವ ಸೇವೆ, ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣದ ಪ್ರಸಾದ ವಿತರಣೆ ನಡೆದು ಜಾತ್ರೋತ್ಸವವು ಸಂಪನ್ನಗೊಂಡಿತು..

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ಮಕ್ಕಳ ಕುಣಿತ ಭಜನಾ ತಂಡ ಹಾಗೂ ಮಲ್ಲಿಪ್ಪಾಡಿ ಶ್ರೀ ಸದಾಶಿವೇಶ್ವರ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಯೋಗೇಶ್ ಕುಮಾರ್ ಕೆ.ಎಸ್, ಅನುವಂಶಿಕ ಆಡಳಿತ ಮೋಕ್ತೆಸರರಾದ ಸುಬ್ರಹ್ಮಣ್ಯ ನೂರಿತ್ತಾಯ, ಅರ್ಚಕರಾದ ರಂಗನಾಥ ನೂರಿತ್ತಾಯ, ರತ್ನಾಕರ ನೂರಿತ್ತಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಪದ್ಮ ನಾಯ್ಕ ಖಂಡಿಗ, ಕಾರ್ಯದರ್ಶಿ ಮೋಹನ್ ಪೂಜಾರಿ ಅಶ್ವಥ ಪಳಿಕೆ, ಕೋಶಾಧಿಕಾರಿ ಸೌಮ್ಯ ಮೋಹನ್ ಬಂಗೇರ, ಹಾಗೂ ಜಾತ್ರೊತ್ಸವ ಸಮಿತಿಯ ಮಾಜಿ ಅಧ್ಯಕ್ಷರುಗಳು ,ಪದಾಧಿಕಾರಿಗಳು, ಸೇವಾ ಸಮಿತಿ ಸಮಿತಿಯ ಸರ್ವ ಸದಸ್ಯರು ಊರಿನ ಭಗವದ್ ಭಕ್ತರು ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya
error: Content is protected !!