25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

ತೆಂಕಕಾರಂದೂರು ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ ಡಿ.26 ರಂದು ಮಡಂತ್ಯಾರು ವೇದಮೂರ್ತಿ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಗೊನೆ ಮುಹೂರ್ತ, ಸ್ವಸ್ತಿ ಪುಣ್ಯಾಹವಾಚನ, ಶ್ರೀ ಗಣಪತಿ ಹವನ, ಪಂಚವಿಂಶತಿ ಕಳಶ ಪೂಜೆ, ಸಹಸ್ರನಾಮಾರ್ಚನೆ ಸಹಿತ ಹಾಲು ಪಾಯಸ ಸೇವೆ, ನಾಗತಂಬಿಲ, ಪ್ರಧಾನ ಹೋಮ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ಗಣಪತಿ ಹಾಗೂ ದುರ್ಗೆ ಕಳಸ ಅಭಿಷೇಕ, ದೈವಗಳ ಕಲಶಾಭಿಷೇಕ, ಪಂಚಪರ್ವ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ದೇವರಿಗೆ ಮಹಾ ರಂಗಪೂಜೆ, ದೈವಗಳಿಗೆ ಪರ್ವ ಸೇವೆ, ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣದ ಪ್ರಸಾದ ವಿತರಣೆ ನಡೆದು ಜಾತ್ರೋತ್ಸವವು ಸಂಪನ್ನಗೊಂಡಿತು..

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ಮಕ್ಕಳ ಕುಣಿತ ಭಜನಾ ತಂಡ ಹಾಗೂ ಮಲ್ಲಿಪ್ಪಾಡಿ ಶ್ರೀ ಸದಾಶಿವೇಶ್ವರ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಯೋಗೇಶ್ ಕುಮಾರ್ ಕೆ.ಎಸ್, ಅನುವಂಶಿಕ ಆಡಳಿತ ಮೋಕ್ತೆಸರರಾದ ಸುಬ್ರಹ್ಮಣ್ಯ ನೂರಿತ್ತಾಯ, ಅರ್ಚಕರಾದ ರಂಗನಾಥ ನೂರಿತ್ತಾಯ, ರತ್ನಾಕರ ನೂರಿತ್ತಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಪದ್ಮ ನಾಯ್ಕ ಖಂಡಿಗ, ಕಾರ್ಯದರ್ಶಿ ಮೋಹನ್ ಪೂಜಾರಿ ಅಶ್ವಥ ಪಳಿಕೆ, ಕೋಶಾಧಿಕಾರಿ ಸೌಮ್ಯ ಮೋಹನ್ ಬಂಗೇರ, ಹಾಗೂ ಜಾತ್ರೊತ್ಸವ ಸಮಿತಿಯ ಮಾಜಿ ಅಧ್ಯಕ್ಷರುಗಳು ,ಪದಾಧಿಕಾರಿಗಳು, ಸೇವಾ ಸಮಿತಿ ಸಮಿತಿಯ ಸರ್ವ ಸದಸ್ಯರು ಊರಿನ ಭಗವದ್ ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya
error: Content is protected !!