July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

ಬೆಳ್ತಂಗಡಿ: ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಆಯ್ಕೆಗಳನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ ಎಂ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜು ಮತ್ತು ನಿಟ್ಟೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ವೃತ್ತಿ ಮಾರ್ಗದರ್ಶನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ, ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ವೃತ್ತಿಪರ ಕೋರ್ಸುಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಉದ್ಯೋಗವನ್ನು ಪಡೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ನಿಟ್ಟೆ ವಿಶ್ವವಿದ್ಯಾನಿಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಪವನ್ ವರ್ಗೀಸ್ ಉಪಸ್ಥಿತರಿದ್ದರು. ‌ ನಿಟ್ಟೆ ವಿಶ್ವವಿದ್ಯಾಲಯದ ಸಹಾಯಕ ನಿರ್ದೇಶಕ ವಿವೇಕ್ ರಂಜನ್ ಭಂಡಾರಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಿದರು.
ಉಪನ್ಯಾಸಕ ಶಂಕರ್ ರಾವ್ ಸ್ವಾಗತಿಸಿದರು. ಉಪನ್ಯಾಸಕಿ ಮೀನಾಕ್ಷಿ ಧನ್ಯವಾದವಿತ್ತರು. ಉಪನ್ಯಾಸಕಿ ಅನುರಾಧ ಕೆ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!