September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

ಬೆಳ್ತಂಗಡಿ: ಬೈಕ್‌ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕಾಡುಕೋಣ ದಾಳಿ ಮಾಡಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಲಾಲ ಗ್ರಾಮದಲ್ಲಿ ಡಿ.26ರಂದು ನಡೆದಿದೆ.

ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯವರ ಪುತ್ರ ಸುಕೇಶ್(31) ರವರು ಬೆಳ್ತಂಗಡಿ ಬೈಕ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಕರ್ತವ್ಯ ಮುಗಿಸಿ ರಾತ್ರಿ ಸುಮಾರು 8.45 ಕ್ಕೆ ಮನೆಗೆ ಹೋಗುತಿದ್ದ ವೇಳೆ ಲಾಲ ಗ್ರಾಮದ ಬೇಲಾಜೆ ಅಲೆಕ್ಕಿ ಎಂಬಲ್ಲಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ ಕಾಡಿನಿಂದ ರಸ್ತೆಗೆ ದಾಟಿಕೊಂಡು ಬಂದು ಸಂಚಾರಿಸುತ್ತಿದ್ದ ಬೈಕ್ ಮೇಲೆ ದಾಳಿ ಮಾಡಿದೆ.

ಈ ವೇಳೆ ಬೈಕ್ ಸವಾರ ಸುಕೇಶ್ ರವರ ಕಾಲು ಮತ್ತು ಕೈ ಗೆ ಗಂಭೀರ ಗಾಯವಾಗಿದ್ದು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡುಕೋಣ ದಾಳಿಗೆ ಬೈಕ್‌ಗೆ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಲಾಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಡಿ.೨೭ರಂದು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya
error: Content is protected !!