July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

ಬೆಳ್ತಂಗಡಿ: ಬೈಕ್‌ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕಾಡುಕೋಣ ದಾಳಿ ಮಾಡಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಲಾಲ ಗ್ರಾಮದಲ್ಲಿ ಡಿ.26ರಂದು ನಡೆದಿದೆ.

ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯವರ ಪುತ್ರ ಸುಕೇಶ್(31) ರವರು ಬೆಳ್ತಂಗಡಿ ಬೈಕ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಕರ್ತವ್ಯ ಮುಗಿಸಿ ರಾತ್ರಿ ಸುಮಾರು 8.45 ಕ್ಕೆ ಮನೆಗೆ ಹೋಗುತಿದ್ದ ವೇಳೆ ಲಾಲ ಗ್ರಾಮದ ಬೇಲಾಜೆ ಅಲೆಕ್ಕಿ ಎಂಬಲ್ಲಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ ಕಾಡಿನಿಂದ ರಸ್ತೆಗೆ ದಾಟಿಕೊಂಡು ಬಂದು ಸಂಚಾರಿಸುತ್ತಿದ್ದ ಬೈಕ್ ಮೇಲೆ ದಾಳಿ ಮಾಡಿದೆ.

ಈ ವೇಳೆ ಬೈಕ್ ಸವಾರ ಸುಕೇಶ್ ರವರ ಕಾಲು ಮತ್ತು ಕೈ ಗೆ ಗಂಭೀರ ಗಾಯವಾಗಿದ್ದು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡುಕೋಣ ದಾಳಿಗೆ ಬೈಕ್‌ಗೆ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಲಾಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಡಿ.೨೭ರಂದು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

“ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಕಾರ್ಯಕ್ರಮದಡಿಯಲ್ಲಿ ಕೊಡೆಗಳ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya
error: Content is protected !!