23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳು ಮತ್ತು ಆಲೋಚನೆಗಳನ್ನು ಪ್ರದರ್ಶಿಸುವ ಹಾಗೂ ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ, ನಾವೀನ್ಯತೆಯನ್ನು ಬೆಳೆಸುವ ಗುರಿಯೊಂದಿಗೆ ಶಾಲಾ ಅಟಲ್ ಟಿಂಕರಿಂಗ್ ಲ್ಯಾಬ್ ವಿಭಾಗದಿಂದ “ಎ.ಟಿ.ಎಲ್ ಫೆಸ್ಟ್ 2025” ಆಯೋಜಿಸಲಾಗಿತ್ತು. ಶಾಲಾ ವಿದ್ಯಾರ್ಥಿಗಳು ವಿವಿಧ ಕಾರ್ಯ ಯೋಜನೆಗಳನ್ನು ತಾವೇ ತಯಾರಿಸಿ ಪ್ರದರ್ಶನ ಏರ್ಪಡಿಸಿದ್ದರು.

ಉಜಿರೆ ಎಸ್.ಡಿ.ಎಮ್ ತಂತ್ರಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹಾಗೂ ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶ್ರೀ ಅಮರೇಶ ಹೆಬ್ಬಾರ್.ಎ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳ ಕಾರ್ಯ ಯೋಜನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿ ಶುಭಹಾರೈಸಿದರು.

ಉಜಿರೆ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶಿವರಾಜ್ ಹಾಗೂ ಚಿತ್ರದುರ್ಗ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕ ಸುನಿಲ್ ಪಿ.ಜೆ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿ ತೀರ್ಪು ನೀಡಿದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya
error: Content is protected !!