ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

ಬೆಳ್ತಂಗಡಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಣೀಕ್ ಕಿನ್ನಿಗೋಳಿ ಅವರು ಭರ್ಜರಿ ಜಯ ಸಾಧಿಸುವಲ್ಲಿ ಮಡಂತ್ಯಾರು ಸಹಕಾರಿ ಸಂಘದ ಅಧ್ಯಕ್ಷ ಜೋಯೇಲ್ ಮೆಂಡೋನ್ಸ ವಿಶೇಷ ಪಾತ್ರ ವಹಿಸಿದ್ದಾರೆ.

ಅತೀ ಹೆಚ್ಚು ಕ್ರಿಶ್ಚಿಯನ್ ಮತದಾರರನ್ನು ಹೊಂದಿರುವ ಈ ವಾರ್ಡ್‌ನಲ್ಲಿ, ಜಾತಿ-ಧರ್ಮದ ಭೇದ ಮರೆತು ಜನತೆ ಶಾಸಕ ಜನ ಸೇವಕ ಉಮಾನಾಥ್ ಕೋಟ್ಯಾನ್ ರವರು ಮಾಡಿದ ಅಭಿವೃದ್ಧಿಗೆ ಮತ ನೀಡಿದ್ದಾರೆ. ಕ್ರಿಶ್ಚಿಯನ್ ಸಮುದಾಯವು ಬಿಜೆಪಿಯ “ಸಬ್ ಕಾ ಸಾತ್, ಸಬ್ ಕಾ ವಿಕಾಸ್” ಮಂತ್ರ ಮತ್ತು ಪ್ರಧಾನಿ ಮೋದಿಯವರ ಅಭಿವೃದ್ಧಿ ಪರ ಚಿಂತನೆಗೆ ನೀಡಿದ ಸ್ಪಷ್ಟ ಜನಾದೇಶ ಇದಾಗಿದೆ.

ವಿಶೇಷವಾಗಿ ವಾರ್ಡ್ ನಂಬರ್ 16 ರಲ್ಲಿ ಸುಮಾರು 700ಕ್ಕಿಂತ ಅಧಿಕ ಕ್ರೈಸ್ತ ಮತದಾರರು ಮತ್ತು ಸುಮಾರು 300ಮಂದಿ ಹಿಂದೂ ಮತದಾರರು ಇರುವಂತಹ ವಾರ್ಡಿನಲ್ಲಿ ಕ್ರೈಸ್ತ ಸಮುದಾಯದ ವಿಶ್ವಾಸವನ್ನು ಗಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದಂತಹ ಸಂಘಟನಾ ಚತುರ ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರು ಜಿಲ್ಲಾ ಪ್ರಭಾರಿ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ‌ ಅಧ್ಯಕ್ಷ ಜೋಯಲ್ ಮೆಂಡೋನ್ಸ ಅವರ ಚಮತ್ಕಾರ, ತಂತ್ರಗಾರಿಕೆಯಿಂದ ಜಯ ತರುವಲ್ಲಿ ಯಶಸ್ವಿಯಾಗಿದೆ. ಈ ಯಶಸ್ಸು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿಯೂ ಕ್ರೈಸ್ತ ಸಮುದಾಯದವರು ಭಾರತೀಯ ಜನತಾ ಪಾರ್ಟಿಯ ಬೆಂಬಲಿಸುವಂತಹ ಮುನ್ಸೂಚನೆ ಕಿನ್ನಿಗೋಳಿಯ ಪಟ್ಟಣ ಪಂಚಾಯತ್ ಚುನಾವಣೆಯ ಮುಖಾಂತರ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ಜೋಯಲ್ ಮೆಂಡೊನ್ಸರ್ ಅವರ ಈ ತಂತ್ರಗಾರಿಕೆ ರಾಷ್ಟ್ರ,ರಾಜ್ಯ ಮತ್ತು ಜಿಲ್ಲಾ ಭಾರತೀಯ ಜನತಾ ಪಕ್ಷದ ಪ್ರಮುಖರಿಂದ ಭಾರಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಇವರ ತಂಡದಲ್ಲಿ ಮಂಡಲ ಪ್ರಭಾರಿಗಳಾದ ಗ್ಲೆನ್ ವಿಶಾಲ್ ಡಿಸಿಲ್ವಾ ಮೂಡುಬಿದಿರೆ, ಜೋಯ್ಸನ್ ಡಿಸೋಜಾ ನೀರುಡೆ, ಸ್ಟ್ಯಾನಿ ಪಿಂಟೋ, ರೂಬೆನ್ ಡಿಸೋಜಾ, ಸಚಿನ್ ರೋಜಾರಿಯೋ ,ಗ್ರಾಮ ಪಂಚಾಯತ್ ಸದಸ್ಯ ಅನಿತಾ ಡಿಕೋಸ್ಟ ಇವರ ಸಹಕಾರ ಮರೆಯುವಂತಿಲ್ಲ.

Related posts

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya
error: Content is protected !!