July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

ಬೆಳ್ತಂಗಡಿ: ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ರೂ. 1 ಕೋಟಿ ವೆಚ್ಚದ ನಗರಲಂಕಾರ ದೀಪವನ್ನು ಬರೋಡ ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಅವರು ಡಿ 26 ರಂದು ಲೋಕಾರ್ಪಣೆಗೊಳಿಸಿದರು.

ಬಳಿಕ ಮಾತನಾಡಿದ ಅವರು ಅಭಿವೃದ್ಧಿಯ ಸಂಕಲ್ಪ ಹೊತ್ತು ಶಾಸಕ ಹರೀಶ್ ಪೂಂಜರವರು ತಾಲೂಕಿಗೆ
ಸಾವಿರಾರು ಕೋಟಿ ಅನುದಾನದ ತಂದಿರುವುದಲ್ಲದೇ ಕುವೆಟ್ಟು ಗ್ರಾಮದ ಅಭಿವೃದ್ಧಿಗೆ ಅತೀ ಹೆಚ್ಚು ಅನುದಾನ ನೀಡಿ ಗುರುವಾಯನಕೆರೆ-ಮೂಡಬಿದ್ರೆ ರಸ್ತೆಯ ಶಕ್ತಿನಗರದಲ್ಲಿ ರಸ್ತೆ ಸೌಂದರ್ಯಕ್ಕಾಗಿ ಉತ್ತಮ ರೀತಿಯ ದೀಪಲಂಕಾರ ವ್ಯವಸ್ಥೆ ಮಾಡಿದ್ದಾರೆ. ಅವರಿಗೆ ಕುವೆಟ್ಟು ಗ್ರಾಮಸ್ಥರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲು ಸಂತೋಷ ಪಡುತ್ತೇನೆ.ಮುಂದಿನ ದಿನಗಳಲ್ಲಿ ಈ ದೀಪಾಲಂಕಾರ ಉತ್ತಮ ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಅದಕ್ಕಾಗಿ ಸಂಪೂರ್ಣ ಸಹಕಾರ ನೀಡಲು ಸದಾ ಸಿದ್ಧ ಎಂದರಲ್ಲದೇ ರಸ್ತೆಯ ನಡುವೆ ಇರುವ ವಿಭಾಜಕದಲ್ಲಿ ಪ್ರತಿಯೊಬ್ಬರು ಹೂವಿನ ಗಿಡ ನೆಟ್ಟು ಪೋಷಿಸಿ ನಗರಲಂಕಾರ ಹೆಚ್ಚಿಸುವ ಕೆಲಸ ಸ್ಥಳೀಯರು ಮಾಡಬೇಕಿದೆ ಎಂದರು.

ಶಾಸಕ ಹರೀಶ್ ಪೂಂಜ ಮಾತನಾಡಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆಗೆ ಸ್ಪಂದಿಸಿ ಉತ್ತಮ ರೀತಿಯ ದೀಪದ ವ್ಯವಸ್ಥೆ ಕಲ್ಪಿಸಿ ಶಕ್ತಿನಗರಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಲೋಕೋಪಯೋಗಿ ಇಲಾಖಾ ಇಂಜಿನಿಯರ್ ಸೂರಜ್ ಹಾನಿಂಜ,ಗುರುವಾಯನಕೆರೆ ಸಿಎ ಬ್ಯಾಂಕ್ ಅದ್ಯಕ್ಷ ಮುಗುಳಿ ನಾರಾಯಣ ರಾವ್,ಜಿ.ಪಂ ಮಾಜಿ ಸದಸ್ಯೆ ಮಮತಾ ಎಂ ಶೆಟ್ಟಿ, ಕುವೆಟ್ಟು ಗ್ರಾ.ಪಂ ಉಪಾಧ್ಯಕ್ಷ ಗಣೇಶ್ ಕುಲಾಲ್, ಸದಸ್ಯರಾದ ನಿತೀಶ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಆಶಾಲತಾ, ಹೇಮಂತ್ ಶೆಟ್ಟಿ, ನಿತೀನ್ ಬರಾಯ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!