25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ: ಸಹಕಾರ ಸಂಘದ ಅಭಿವೃದ್ಧಿಗೆ ಕಾರಣೀಕರ್ತರಾದ ಸಹೃದಯ ಸದಸ್ಯರು ಮತ್ತು ಗ್ರಾಹಕ ಬಾಂಧವರ ಸಮ್ಮಿಲನ ಕಾರ್ಯಕ್ರಮದೊಂದಿಗೆ, ನಡೆದು ಬಂದ ಹಾದಿಯ ಮೆಲುಕು ಹಾಕುವ ಹೆಜ್ಜೆಗುರುತು ಕಾರ್ಯಕ್ರಮವು ಕೇಂದ್ರ ಕಛೇರಿಯ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಸಭಾಭವನದಲ್ಲಿ ಡಿ 27 ರಂದು ನಡೆಯಿತು.

ಸಂಸ್ಥೆಯ ಪ್ರಗತಿಯ ಪಯಣದಲ್ಲಿ ಹಿಂದಿನ‌ ಪ್ರತಿ ಹೆಜ್ಜೆಗಳತ್ತ ಒಂದು ನೋಟವನ್ನು ಬಿರುವ ವಿಶೇಷ ಪ್ರಯತ್ನದ ಅಂಗವಾಗಿ ಸಂಘದ ಗ್ರಾಹಕರೊಂದಿಗೆ ಚರ್ಚಿಸಲಾಯಿತು.
26 ಶಾಖೆಗಳು, 100ಕ್ಕೂ ಹೆಚ್ಚು ಸಿಬ್ಬಂದಿಗಳು, ರೂ.ರೂ 287 ಕೋಟಿ ಠೇವಣಿ, ರೂ 1404 ಕೋಟಿ ವ್ಯವಹಾರ, ರೂ 4.84 ಕೋಟಿ ಲಾಭವನ್ನು ಸಂಸ್ಥೆ ಗಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ‌ ಸಂಘದ ಅಧ್ಯಕ್ಷ ಭಗೀರಥ ಜಿ ವಹಿಸಿ ದೀಪ ಪ್ರಜ್ವಲನೆ ನೇರವೇರಿಸಿ ಮಾತನಾಡಿ ಗ್ರಾಹಕರ ಮಿತ್ರರ ಸಹಕಾರದಿಂದ ಶ್ರೀ ಗುರುದೇವ ಸೊಸೈಟಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.ಮುಂದಿನ ದಿನಗಳಲ್ಲಿ ಇನ್ನೂ 5 ಸಂಘದ ಸಂಸ್ಥೆಗಳನ್ನು ಪ್ರಾರಂಭಿಸಲಿದ್ದೇವೆ ಎಂದರು.

ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಗಂಗಾಧರ ಮಿತ್ತಮಾರು,ಚಿದಾನಂದ ಪೂಜಾರಿ ಎಲ್ದಕ್ಕ, ಚಂದ್ರಶೇಖರ್, ಶ್ರೀಮತಿ ತನುಜಾ ಶೇಖರ್, ಧರಣೇಂದ್ರ ಕುಮಾರ್, ಸೂರಜ್ ಕುಮಾರ್, ವಿಶೇಷಾಧಿಕಾರಿ ಯಂ.ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್, ನಿರ್ದೆಶಕರಾದ ಹೆಚ್ ಧರ್ಣಪ್ಪ ಪೂಜಾರಿ ಉಪಸ್ಥಿತರಿದ್ದರು.

ದೈನಿಕ ಸಂಗ್ರಹಕ ವಿಶ್ವನಾಥ ಪ್ರಾರ್ಥನೆ ಹಾಡಿದರು. ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

Related posts

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya
error: Content is protected !!