23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ: ಸಹಕಾರ ಸಂಘದ ಅಭಿವೃದ್ಧಿಗೆ ಕಾರಣೀಕರ್ತರಾದ ಸಹೃದಯ ಸದಸ್ಯರು ಮತ್ತು ಗ್ರಾಹಕ ಬಾಂಧವರ ಸಮ್ಮಿಲನ ಕಾರ್ಯಕ್ರಮದೊಂದಿಗೆ, ನಡೆದು ಬಂದ ಹಾದಿಯ ಮೆಲುಕು ಹಾಕುವ ಹೆಜ್ಜೆಗುರುತು ಕಾರ್ಯಕ್ರಮವು ಕೇಂದ್ರ ಕಛೇರಿಯ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಸಭಾಭವನದಲ್ಲಿ ಡಿ 27 ರಂದು ನಡೆಯಿತು.

ಸಂಸ್ಥೆಯ ಪ್ರಗತಿಯ ಪಯಣದಲ್ಲಿ ಹಿಂದಿನ‌ ಪ್ರತಿ ಹೆಜ್ಜೆಗಳತ್ತ ಒಂದು ನೋಟವನ್ನು ಬಿರುವ ವಿಶೇಷ ಪ್ರಯತ್ನದ ಅಂಗವಾಗಿ ಸಂಘದ ಗ್ರಾಹಕರೊಂದಿಗೆ ಚರ್ಚಿಸಲಾಯಿತು.
26 ಶಾಖೆಗಳು, 100ಕ್ಕೂ ಹೆಚ್ಚು ಸಿಬ್ಬಂದಿಗಳು, ರೂ.ರೂ 287 ಕೋಟಿ ಠೇವಣಿ, ರೂ 1404 ಕೋಟಿ ವ್ಯವಹಾರ, ರೂ 4.84 ಕೋಟಿ ಲಾಭವನ್ನು ಸಂಸ್ಥೆ ಗಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ‌ ಸಂಘದ ಅಧ್ಯಕ್ಷ ಭಗೀರಥ ಜಿ ವಹಿಸಿ ದೀಪ ಪ್ರಜ್ವಲನೆ ನೇರವೇರಿಸಿ ಮಾತನಾಡಿ ಗ್ರಾಹಕರ ಮಿತ್ರರ ಸಹಕಾರದಿಂದ ಶ್ರೀ ಗುರುದೇವ ಸೊಸೈಟಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.ಮುಂದಿನ ದಿನಗಳಲ್ಲಿ ಇನ್ನೂ 5 ಸಂಘದ ಸಂಸ್ಥೆಗಳನ್ನು ಪ್ರಾರಂಭಿಸಲಿದ್ದೇವೆ ಎಂದರು.

ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಗಂಗಾಧರ ಮಿತ್ತಮಾರು,ಚಿದಾನಂದ ಪೂಜಾರಿ ಎಲ್ದಕ್ಕ, ಚಂದ್ರಶೇಖರ್, ಶ್ರೀಮತಿ ತನುಜಾ ಶೇಖರ್, ಧರಣೇಂದ್ರ ಕುಮಾರ್, ಸೂರಜ್ ಕುಮಾರ್, ವಿಶೇಷಾಧಿಕಾರಿ ಯಂ.ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್, ನಿರ್ದೆಶಕರಾದ ಹೆಚ್ ಧರ್ಣಪ್ಪ ಪೂಜಾರಿ ಉಪಸ್ಥಿತರಿದ್ದರು.

ದೈನಿಕ ಸಂಗ್ರಹಕ ವಿಶ್ವನಾಥ ಪ್ರಾರ್ಥನೆ ಹಾಡಿದರು. ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

Related posts

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!