22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ: ಸಹಕಾರ ಸಂಘದ ಅಭಿವೃದ್ಧಿಗೆ ಕಾರಣೀಕರ್ತರಾದ ಸಹೃದಯ ಸದಸ್ಯರು ಮತ್ತು ಗ್ರಾಹಕ ಬಾಂಧವರ ಸಮ್ಮಿಲನ ಕಾರ್ಯಕ್ರಮದೊಂದಿಗೆ, ನಡೆದು ಬಂದ ಹಾದಿಯ ಮೆಲುಕು ಹಾಕುವ ಹೆಜ್ಜೆಗುರುತು ಕಾರ್ಯಕ್ರಮವು ಕೇಂದ್ರ ಕಛೇರಿಯ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಸಭಾಭವನದಲ್ಲಿ ಡಿ 27 ರಂದು ನಡೆಯಿತು.

ಸಂಸ್ಥೆಯ ಪ್ರಗತಿಯ ಪಯಣದಲ್ಲಿ ಹಿಂದಿನ‌ ಪ್ರತಿ ಹೆಜ್ಜೆಗಳತ್ತ ಒಂದು ನೋಟವನ್ನು ಬಿರುವ ವಿಶೇಷ ಪ್ರಯತ್ನದ ಅಂಗವಾಗಿ ಸಂಘದ ಗ್ರಾಹಕರೊಂದಿಗೆ ಚರ್ಚಿಸಲಾಯಿತು.
26 ಶಾಖೆಗಳು, 100ಕ್ಕೂ ಹೆಚ್ಚು ಸಿಬ್ಬಂದಿಗಳು, ರೂ.ರೂ 287 ಕೋಟಿ ಠೇವಣಿ, ರೂ 1404 ಕೋಟಿ ವ್ಯವಹಾರ, ರೂ 4.84 ಕೋಟಿ ಲಾಭವನ್ನು ಸಂಸ್ಥೆ ಗಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ‌ ಸಂಘದ ಅಧ್ಯಕ್ಷ ಭಗೀರಥ ಜಿ ವಹಿಸಿ ದೀಪ ಪ್ರಜ್ವಲನೆ ನೇರವೇರಿಸಿ ಮಾತನಾಡಿ ಗ್ರಾಹಕರ ಮಿತ್ರರ ಸಹಕಾರದಿಂದ ಶ್ರೀ ಗುರುದೇವ ಸೊಸೈಟಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.ಮುಂದಿನ ದಿನಗಳಲ್ಲಿ ಇನ್ನೂ 5 ಸಂಘದ ಸಂಸ್ಥೆಗಳನ್ನು ಪ್ರಾರಂಭಿಸಲಿದ್ದೇವೆ ಎಂದರು.

ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಗಂಗಾಧರ ಮಿತ್ತಮಾರು,ಚಿದಾನಂದ ಪೂಜಾರಿ ಎಲ್ದಕ್ಕ, ಚಂದ್ರಶೇಖರ್, ಶ್ರೀಮತಿ ತನುಜಾ ಶೇಖರ್, ಧರಣೇಂದ್ರ ಕುಮಾರ್, ಸೂರಜ್ ಕುಮಾರ್, ವಿಶೇಷಾಧಿಕಾರಿ ಯಂ.ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್, ನಿರ್ದೆಶಕರಾದ ಹೆಚ್ ಧರ್ಣಪ್ಪ ಪೂಜಾರಿ ಉಪಸ್ಥಿತರಿದ್ದರು.

ದೈನಿಕ ಸಂಗ್ರಹಕ ವಿಶ್ವನಾಥ ಪ್ರಾರ್ಥನೆ ಹಾಡಿದರು. ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

Related posts

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya
error: Content is protected !!