23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

ಬೆಳ್ತಂಗಡಿ: ಬೈಕ್‌ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕಾಡುಕೋಣ ದಾಳಿ ಮಾಡಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಲಾಲ ಗ್ರಾಮದಲ್ಲಿ ಡಿ.26ರಂದು ನಡೆದಿದೆ.

ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯವರ ಪುತ್ರ ಸುಕೇಶ್(31) ರವರು ಬೆಳ್ತಂಗಡಿ ಬೈಕ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಕರ್ತವ್ಯ ಮುಗಿಸಿ ರಾತ್ರಿ ಸುಮಾರು 8.45 ಕ್ಕೆ ಮನೆಗೆ ಹೋಗುತಿದ್ದ ವೇಳೆ ಲಾಲ ಗ್ರಾಮದ ಬೇಲಾಜೆ ಅಲೆಕ್ಕಿ ಎಂಬಲ್ಲಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ ಕಾಡಿನಿಂದ ರಸ್ತೆಗೆ ದಾಟಿಕೊಂಡು ಬಂದು ಸಂಚಾರಿಸುತ್ತಿದ್ದ ಬೈಕ್ ಮೇಲೆ ದಾಳಿ ಮಾಡಿದೆ.

ಈ ವೇಳೆ ಬೈಕ್ ಸವಾರ ಸುಕೇಶ್ ರವರ ಕಾಲು ಮತ್ತು ಕೈ ಗೆ ಗಂಭೀರ ಗಾಯವಾಗಿದ್ದು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡುಕೋಣ ದಾಳಿಗೆ ಬೈಕ್‌ಗೆ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಲಾಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಡಿ.೨೭ರಂದು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya
error: Content is protected !!