July 23, 2026
ಕ್ರೀಡಾ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ ಇದರ ಉದ್ಘಾಟನೆಯನ್ನು ನಡುಬೊಟ್ಟು ಇದರ ಧರ್ಮದರ್ಶಿ ಶ್ರೀ ಎನ್ ರವಿ ಇವರು ಡಿ. 28ರಂದು ನೆರವೇರಿಸಿದರು.

ಅಧ್ಯಕ್ಷತೆಯನ್ನು ತಾಲೂಕು ಸಂಘದ ಉಪಾಧ್ಯಕ್ಷರಾದ ಶ್ರೀ ಪದ್ಮ ಕುಮಾರ್ ವಹಿಸಿದರು. ಮುಖ್ಯ ಅತಿಥಿಗಳಾಗಿ ನವಶಕ್ತಿ ಶಶಿಧರ್ ಶೆಟ್ಟಿ ಬರೋಡರವರು ಕುಲಾಲ ಸಮುದಾಯ ಎಲ್ಲರಿಗೂ ಎಲ್ಲಾ ಸಂದರ್ಭದಲ್ಲಿ ಅವಶ್ಯಕತೆ ಇರುವ ಸಮುದಾಯ ಅಂತ ಹೇಳುತ್ತಾ ಭವನ ನಿರ್ಮಾಣಕ್ಕೆ ರೂ. 2.00 ಲಕ್ಷ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಕಾರಿಂಜ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಶೆಟ್ಟಿ, ವಿಜಯ ಕೋ ಆಪರೇಟಿವ್ ಸೊಸೈಟಿನ ಅಧ್ಯಕ್ಷರಾದ ಅಜಿತ್ ಕೊರ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ, ಯುವ ವೇದಿಕೆ ಅಧ್ಯಕ್ಷರಾದ ಅವಿನಾಶ್ ಮಾಣೂರು, ಲೋಕೇಶ್ ಕುಲಾಲ್, ಉಮೇಶ್ ಕುಲಾಲ್, ಹೊನ್ನಪ್ಪ ಮೂಲ್ಯ ಮಾಣೂರು, ಯತೀಶ್ ಸಿರಿಮಜಲ್, ಮೋಹನ್ ಕಂಚಿಂಜ ಯುವ ವೇದಿಕೆಯ ಕಾರ್ಯದರ್ಶಿ ತಿಲಕ್ ರಾಜ್ ಉಪಸ್ಥಿತರಿದ್ದರು.

Related posts

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!