23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜು

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸವಣಾಲು:ಡಿ. 27ರಂದು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರಗಿತು.


ಬೆಳಿಗ್ಗೆ 9-00 ಗಂಟೆಗೆ ನಮ್ಮ ಶಾಲೆಯ ಹಿರಿಯ ವಿದ್ಯಾರ್ಥಿ ಶ್ರೀ ಗಜಾನನ ಭಟ್ ನಿವೃತ್ತ (ACF)ಅರಣ್ಯ ಇಲಾಖೆಯ ಸಹಾಯಕ ಆಯುಕ್ತರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಗಣೇಶ್ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರುಗಿತು. ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಇವರು ಕಾರ್ಯಕ್ರಮ ಉದ್ಘಾಟಿಸಿದರು ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀ ಲೋಕನಾಥ ಶೆಟ್ಟಿ, ಸದಸ್ಯರಾದ ಶ್ರೀ ಚಂದ್ರಶೇಖರ , ಶ್ರೀ ಪ್ರಭಾಕರ ಆಚಾರ್ಯ, ಶ್ರೀಮತಿ ಜಯಲಕ್ಷ್ಮೀ, ಲ|ಮುರಳಿ ಬಲಿಪ ಬೆಳ್ತಂಗಡಿ ಲಯನ್ಸ್ ಕ್ಲಬ್ಬಿನ ಅಧ್ಯಕ್ಷರು ,ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ದಯಾನಂದ ರೈ, ಉಪಾಧ್ಯಕ್ಷ ಶ್ರೀ ದಾಮೋದರ ಬಂಗೇರ, ಶ್ರೀಮತಿ ಪ್ರೇಮಾ, ಮುಖ್ಯೋಪಾಧ್ಯಾಯರಾದ ಶ್ರೀ ಮಂಜುನಾಥ ಜಿ, ಶ್ರೀಮತಿ ಮಲ್ಲಿಕಾ , ವಿದ್ಯಾರ್ಥಿ ನಾಯಕ ಧನ್ ರಾಜ್ ಇವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಕಾರ್ಯದರ್ಶಿ ಶ್ರೀ ಕೂಸಪ್ಪ ಇವರು ಸ್ವಾಗತಿಸಿದರು,ಶ್ಶ್ರೀ ದಯಾನಂದ ರೈ ಧನ್ಯವಾದವಿತ್ತರು,ಶ್ರೀ ಶಿವಪ್ರಸಾದ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು . ರಾಷ್ಟ ಗೀತೆಯೊಂದಿಗೆ ಬೆಳಗಿನ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!